ವಿವಿಧ ಪಂದ್ಯಾಟ: ಶ್ರೀ ವೆಂ.ಪ.ಪೂ.ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜ್ಯೋತಿ ಪದವಿ ಪೂರ್ವ ಕಾಲೇಜು ಅಜೆಕಾರ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ರವೀಶ್ ಶೆಟ್ಟಿ ಕಾಲೇಜು ತಂಡವನ್ನು ಪ್ರತಿನಿಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಅಮೆಚೂರ್ ಅಸೋಸಿಯೇಶನ್ ಅವರು 18 ಹಾಗೂ 23 ವರ್ಷದೊಳಗಿನವರಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನನ್ ದ್ವಿತೀಯ ಸ್ಥಾನವನ್ನು ಪಡೆದು ಸೌತ್ ಝೋನ್ ನ್ಯಾಷನಲ್ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.