ಮಂಜೇಶ್ವರ: ಹಾಡಹಗಲೇ ವಿದ್ಯಾರ್ಥಿಯ ಅಪಹರಣ

ಮಂಗಳೂರು: ಹಾಡಹಗಲೇ ಕಾಲೇಜು ವಿದ್ಯಾರ್ಥಿಯನ್ನು ಅಪಹರಣ ನಡೆಸಿದಂತಹ ಘಟನೆ ಕಾಸರಗೋಡು ಮಂಜೇಶ್ವರದ ವರ್ಕಾಡಿಯ ಕಳಿಯೂರಲ್ಲಿ ಸೋಮವಾರ ನಡೆದಿದೆ.
ಪಿಯುಸಿ ವಿದ್ಯಾರ್ಥಿ ಹಾರಿಸ್ (17) ಅಪಹರಣಕ್ಕೊಳಗಾದತ. ಕಾರಿನಲ್ಲಿ ಬಂದ ತಂಡ ಅಪಹರಣ ಮಾಡಿದೆ ಎಂದು ತಿಳಿದು ಬಂದಿದೆ. ಈತ ಮಂಗಳೂರಿನ ತೊಕ್ಕೊಟ್ಟಿನ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು, ಹಾರಿಸ್ ತನ್ನ ಸಹೋದರಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ. ಕೋಳಿಯೂರು ಪದವಿನ ಆಡಿಟೋರಿಯಂ ಬಳಿ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಅಪಹರಣ ನಡೆಸಲಾಗಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸರಿಂದ ತನಿಖೆ ನಡೆಯುತ್ತಿದ್ದು, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.