ಅಯೋಧ್ಯೆ: ಗುರುವಾರ ಮುಂಜಾನೆ ಅಯೋಧ್ಯೆಯ ರಾಮಮಂದಿರಕ್ಕೆ ರಾಮಲಲ್ಲಾನ ವಿಗ್ರಹವನ್ನು ತರಲಾಯಿತು. ಗರ್ಭಗುಡಿಯೊಳಗೆ ವಿಶೇಷ ಪೂಜೆಯನ್ನು ನಡೆಸಲಾಯಿತು. ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ಕ್ರೇನ್ ಮೂಲಕ ವಿಗ್ರಹವನ್ನು ಒಳತರಲಾಯಿತು.
VIDEO | Ram Lalla's idol being taken inside the Ram Mandir complex in Ayodhya using a crane. The idol will be kept in the temple's sanctum sanctorum. pic.twitter.com/S2kbRngN8N
— Press Trust of India (@PTI_News) January 17, 2024
ಮೂಲಗಳ ಪ್ರಕಾರ ರಾಮಲಲ್ಲಾ ಮೂರ್ತಿಯನ್ನು ಗರ್ಭಗೃಹದೊಳಗೆ ಇರಿಸಲಾಗಿದೆ. ಜ.22 ರಂದು ಪ್ರಾಣಪ್ರತಿಷ್ಠೆ ನಡೆಯಲಿದೆ.
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಕೃಷ್ಣಶಿಲೆಯ ಬಾಲರಾಮನ ವಿಗ್ರಹ ಆಯ್ಕೆಯಾಗಿದೆ.
ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠೆಗೂ ಮುನ್ನ ಹಲವು ವಿಧಿ ವಿಧಾನಗಳನ್ನು ಕೈಗೊಳ್ಳಲಾಗುತ್ತಿದೆ.












