ಉಡುಪಿ: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ.
ಜೆಎಮ್ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ಒಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ.
ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಬಳಿಕ ನಗರ ಠಾಣೆಯಲ್ಲಿ ರಾಜಿ ಪಂಚಾಯಿತಿ ನಡೆಸಿ ಕಳುಹಿಸಲಾಗಿತ್ತು.
ಆದರೆ ಅದೆ ದಿನ ರಾತ್ರಿ ಮೂರು ಜನರ ತಂಡವು ಈ ಕೃತ್ಯ ಎಸಗಿದ್ದು ಗಾಯಳು ಬಸ್ ಚಾಲಕರು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.












