ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೊತ್ಸವ ಸಮಾರಂಭ

ಉಡುಪಿ: ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೊತ್ಸವ ಸಮಾರಂಭ ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ರಾಜೇಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವೇದಿಕೆಯ ಸದಸ್ಯರು ಅಭಿನಯಿಸಿದ ತುಳು ಸಾಮಾಜಿಕ ಹಾಸ್ಯಮಯ ನಾಟಕ “ಅಜ್ಜಿಗ್ ಏರ್ಲಾ ಇಜ್ಜಿ” ಕಿಕ್ಕಿರಿದ ಜನ ಸಂದಣಿಯಲ್ಲಿ ಯಶಸ್ವಿಯಾಗಿ ಪ್ರದರ್ಶನವಾಯಿತು.

ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಯುವ ವಿಚಾರ ವೇದಿಕೆಯ ಹಡಿಲು ಭೂಮಿ ಕೃಷಿಯ ಫಸಲನ್ನು ಫಲಾನುಭವಿಗಳಿಗೆ ವಿತರಣೆ ಮಾಡಿ ಮಾತನಾಡಿದ ಶಾಸಕಯಶ್ಪಾಲ್ ಸುವರ್ಣ, ಸಮಾಜ ಸುಧಾರಣೆಯಲ್ಲಿ ಯುವಕರ ಪಾತ್ರ ಮಹತ್ವದ್ದು, ಗ್ರಾಮದ ಅಭಿವೃದ್ಧಿಗೆ ನನ್ನ ಸಹಕಾರ ಸದಾ ಇದೆ ಎಂದು ವೇದಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಪಂದನ ವಿಶೇಷ ಚೇತನ ಶಾಲೆ ಮುಖ್ಯಸ್ಥಉಮೇಶ್ ಹಾಗೂ ಜನಾರ್ಧನ ಇವರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ಸ್ಥಳೀಯ ವಿದ್ಯಾರ್ಥಿಗಳಾದ ಹರ್ಷಿತಾ ಪ್ರಜ್ಞಾ, ರಿಯಾ, ಪ್ರೀತಮ್ ಇವರನ್ನು ಅಭಿನಂದಿಸಲಾಯಿತು.
ವಿಶೇಷವಾಗಿ ವೇದಿಕೆ ಅಭಿವೃದ್ದಿ ಕಾರ್ಯದಲ್ಲಿ ಸಹಕರಿಸಿದ ದಾನಿಗಳಾದ ಪ್ರಶಾಂತ್ ಶೆಟ್ಟಿ ಅಮ್ಮುಂಜೆ ಅವರನ್ನು ಗೌರವಿಸಲಾಯಿತು.

ಉಪ್ಪೂರು ವ್ಯ.ಸೇ.ಸ. ಸಂಘದ ಅಧ್ಯಕ್ಷ ರಮೇಶ್ ಎನ್ ಶೆಟ್ಟಿ, ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ ನ ಧರ್ಮಗುರುಗಳು ರೆ.ಫಾ| ಜೋಸೆಫ್ ಮಚಾದೋ, ಉದ್ಯಮಿಗಳಾದ ರೋಯಲ್ ರತ್ನಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಅಶ್ವಿನ್ ರೋಚ್, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕ ಪ್ರಾಂಕಿ ಡಿಸೋಜ, ಮಾಹೆ ಮಣಿಪಾಲದ ಪ್ರಾಧ್ಯಾಪಕ ಡಾ. ಪ್ರಶಾಂತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಪೂಜಾರಿ, ಪಂಚಾಯತ್ ಸದಸ್ಯೆ ರಾಜಶ್ರೀ ಮಸ್ಕರೇನಸ್, ಸಮಾಜ ಸೇವಕರಮೇಶ್ ಕರ್ಕೇರ, ಉದ್ಯಮಿಗಳಾದ ಸಂದೀಪ ನಾಯಕ್ ಅವರ ಉಪಸ್ಥಿಯಲ್ಲಿ ಧ್ವಜಾರೋಹಣ ನೆರವೇರಿತು.

ಸಭಾ ಕಾರ್ಯಕ್ರಮದ ಮುಂಚಿತವಾಗಿ ಸ್ಥಳೀಯ ಅಂಗನವಾಡಿ ಮಕ್ಕಳ ನೃತ್ಯ ಹಾಗೂ ವೇದಿಕೆಯ ಸದಸ್ಯರಾದ, ನೃತ್ಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ಅವರ ನಿರ್ದೇಶನದಲ್ಲಿ ಸ್ಪಂದನ ವಿಶೇಷ ಚೇತನ ಶಾಲೆ ವಿದ್ಯಾರ್ಥಿಗಳು ಮನೋಜ್ಞವಾಗಿ ಅಭಿನಯಿಸಿದ ನೃತ್ಯ ರೂಪಕ “ಶ್ರೀ ರಾಮಾಯಣ ಕಥಾ ಸಾರಾಂಶ” ಪ್ರದರ್ಶನವಾಯಿತು.

ಸಮಾರಂಭದ ನಂತರ ವೇದಿಕೆಯ ಮಹಿಳಾ ಸದಸ್ಯರು ಹಾಗೂ ಮಕ್ಕಳ ನೃತ್ಯ, ತದ ನಂತರ ವೇದಿಕೆಯ ಸದಸ್ಯರು ಅಭಿನಯಿಸಿದ ಯೋಗೀಶ್ ಗಾಣಿಗ ಕೊಳಲಗಿರಿ ನಿರ್ದೇಶನದಲ್ಲಿ ತುಳು ಸಾಮಾಜಿಕ ಹಾಸ್ಯಮಯ ನಾಟಕ “ಆಜ್ಜಿಗ್ ಏರ್ಲಾ ಇಜ್ಜಿ” ಯಶಸ್ವಿಯಾಗಿ ಪ್ರದರ್ಶನವಾಯಿತು.

ಸಭಾ ಕಾರ್ಯಕ್ರಮದ ಅತಿಥಿ ಗಣ್ಯರಿಗೆ ವೇದಿಕೆಯ ಅಧ್ಯಕ್ಷ ದಿನೇಶ್ ಶೆಟ್ಟಿ, ಬೆಳಗ್ಗಿನ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಂದೀಪ್ ಶೆಟ್ಟಿ ಸ್ವಾಗತಿಸಿ, ವೇದಿಕೆಯ ಅಶೋಕ್ ಹಾಗೂ ಸುರೇಶ್ ವಂದಿಸಿದರು. ಯೋಗೀಶ್ ಗಾಣಿಗ, ಸದಾಶಿವ ಕುಮಾರ್, ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.