ಶಂಕರನಾರಾಯಣ: ವ್ಯಕ್ತಿ ನಾಪತ್ತೆ.

ಉಡುಪಿ, ಜೂನ್ 24: ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಜಮದಗ್ನಿಯ ನಿವಾಸಿ ಸಂಜೀವ ಶೆಟ್ಟಿ (73) ಎಂಬ ವ್ಯಕ್ತಿಯು ಜೂನ್ 22 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಪೂರ ಸದೃಢಕಾಯ ಮೈಕಟ್ಟು, ಬಿಳಿಯ ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08259- 280299, ಮೊ.ನಂ: 9480805456, 8277988963 ಅಥವಾ ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 08254- 230880 ಮತ್ತು ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.