ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 20 ರಿಂದ 25ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ಮೆರವಣಿಗೆಯು ಇಂದು ಸಂಜೆ ಗುಡ್ಡೆಯಂಗಡಿ, ಪುಪಾಡಿಕಲ್ಲು, ಜೋಡುಕಟ್ಟೆ ಮಾರ್ಗವಾಗಿ ಹಸಿರು ಹೊರೆಕಾಣಿಕೆಯನ್ನು ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಮರ್ಪಿಸಲಾಯಿತು.

ಹಲವು ಭಜನಾ ತಂಡಗಳು, ಚಂಡೆ ಬಳಗ ಹಾಗೂ ಬ್ಯಾಂಡ್ ಸೆಟ್ ಗಳ ಮೂಲಕ ವೈಭವದ ಮೆರೆವಣಿಗೆ ನಡೆಯಿತು. ಊರ- ಪರಪೂರ ಸಾವಿರಾರು ಭಕ್ತಾದಿಮಾನಿಗಳು ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಹೊರೆಕಾಣಿಕೆಯಲ್ಲಿ ಅಕ್ಕಿ, ಬೆಲ್ಲ ತೆಂಗಿನಕಾಯಿ, ಬಾಳೆ ಎಲೆ, ಸಕ್ಕರೆ, ಸೀಯಾಳ, ತರಕಾರಿ ವಸ್ತುಗಳು, ಹಣ್ಣು ಹಂಪಲು, ಹಿಂಗಾರ ಹೂ, ಎಣ್ಣೆ ಹಾಗೂ ತುಪ್ಪ ಸಮರ್ಪಿಸಾಯಿತು.