ಪಾಳು ಬಿದ್ದ ಮನೆಯಲ್ಲಿ ಅಡಗಿದ್ದ ಚಿರತೆ ಸೆರೆ

ಉಡುಪಿ: ಇಲ್ಲಿನ ಪಾಳು ಬಿದ್ದಿದ್ದ ಮನೆಯೊಂದರಲ್ಲಿ ಅವಿತುಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಇಲ್ಲಿನ ಜನಾಶ್ರಯವಿಲ್ಲದ ಮನೆಯಲ್ಲಿ ಚಿರತೆಯೊಂದು ಅಡಗಿಕೊಂಡಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಹಿಡಿಯುವಲ್ಲಿ ಸಫಲರಾಗಿದ್ದರೆ.

ಮಣಿಪಾಲ, ಸರಳೇಬೆಟ್ಟು ಪರಿಸರದಲ್ಲಿ ಹಲವು ದಿನಗಳಿಂದ ಚಿರತೆ ಓಡಾಟ ಕಂಡುಬಂದಿದ್ದು, ಸ್ಥಳೀಯರು ರಾತಿವೇಳೆ ಓಡಾಡಲು ಭಯಪಡುವಂತಾಗಿದೆ.