ಬೆಂಗಳೂರು: ಡ್ರಗ್ಸ್ ದಂಧೆಯ ಕರಾಳಮುಖವನ್ನು ಸಿಸಿಬಿ ಪೊಲೀಸರು ಬಯಲಿಗೆಳೆಯಲು ಹೊರಟಿರುವ ಬೆನ್ನಲ್ಲೇ, ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಪೊಲೀಸರು ಡ್ರಗ್ಸ್ ಜಾಲವನ್ನು ಭೇದಿಸಲು ಮುಂದಾಗಿದ್ದಾರೆ.
ಡ್ರಗ್ಸ್ ಪೆಡ್ಲರ್ ಗಳು ನೀಡುತ್ತಿರುವ ಹೇಳಿಕೆಯನ್ನು ಆಧಾರಿಸಿ ಐಎಸ್ ಡಿ ಅಧಿಕಾರಿಗಳು, ನಟ ಯೋಗಿ ಅಲಿಯಾಸ್ ಲೂಸ ಮಾದ, ಮಾಜಿ ಕ್ರಿಕೆಟಿಗ ಅಯ್ಯಪ್ಪ, ಖಾಸಗಿ ಸುದ್ದಿವಾಹಿನಿಯ ಉದ್ಯೋಗಿ ನಿಶ್ಚಿತಾ ಸೇರಿದಂತೆ ನಾಲ್ವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ನಾಲ್ವರಿಗೂ ಇತ್ತೀಚೆಗೆ ನೋಟಿಸ್ ನೀಡಿದ್ದ ಐಎಸ್ಡಿ, ವಿಚಾರಣೆಗೆ ಬರುವಂತೆ ಸೂಚಿಸಿತ್ತು. ಅದರನ್ವಯ ಶಾಂತಿನಗರದಲ್ಲಿರುವ ಐಎಸ್ಡಿ ಕಚೇರಿಗೆ ಸೋಮವಾರ ಬೆಳಿಗ್ಗೆ ನಾಲ್ವರು ಹಾಜರಾಗಿದ್ದರು. ಎರಡು ಗಂಟೆ ವಿಚಾರಣೆ ಎದುರಿಸಿದರು.