ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್, ಮೀರತ್ ನಿಂದ ಅರುಣ್ ಗೋವಿಲ್ ಕಣಕ್ಕಿಳಿಸಿದ ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಇತ್ತೀಚಿನ ಅಭ್ಯರ್ಥಿಗಳ ಪಟ್ಟಿಯಲ್ಲಿ ಜನಪ್ರಿಯ ನಟರಾದ ಕಂಗನಾ ರಣಾವತ್ ಮತ್ತು ಅರುಣ್ ಗೋವಿಲ್ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಟಿವಿ ಧಾರಾವಾಹಿ ‘ರಾಮಾಯಣ’ದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಗೋವಿಲ್ ಅವರು ಮೀರತ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಮತ್ತು ಬಾಲಿವುಡ್ ನಟಿ ಕಂಗನಾ ತಮ್ಮ ತವರು ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಲಿದ್ದಾರೆ.

37 ವರ್ಷದ ನಟಿ, ತಮ್ಮನ್ನು ಮಂಡಿಯಿಂದ ಲೋಕಸಭೆಯ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕಾಗಿ ಪಕ್ಷಕ್ಕೆ ಧನ್ಯವಾದ ಅರ್ಪಿಸಿದರು. ಪ್ರಸ್ತುತ ಕ್ಷೇತ್ರವನ್ನು ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಪ್ರತಿನಿಧಿಸುತ್ತಿದ್ದಾರೆ.