ನಟಿ, ಬಿಜೆಪಿ ನಾಯಕಿ ಖುಷ್ಬೂ ಅರೆಸ್ಟ್

ಚೆನ್ನೈ: ಪ್ರತಿಭಟನೆಯೊಂದರಲ್ಲಿ ಭಾಗವಹಿಸಲು ತೆರಳಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹಾಗೂ ಕೆಲವು ಬಿಜೆಪಿ ಸದಸ್ಯರನ್ನು ಮಂಗಳವಾರ ತಮಿಳುನಾಡಿನ ಮುಟ್ಟುಕಾಡುದಲ್ಲಿ ಪೊಲೀಸರು ಬಂಧಿಸಿದರು.

ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಡಿದ್ದರು ಎನ್ನಲಾದ ಮಾತುಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು.  ಅದರಲ್ಲಿ ಪಾಲ್ಗೊಳ್ಳಲು ಖುಷ್ಬೂ ಅವರು ಚಿದಂಬರಂಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಅವರನ್ನು ಬಂಧಿಸಲಾಗಿದೆ.

ಚಿದಂಬರಂನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಸೋಮವಾರ ಅನುಮತಿ ನಿರಾಕರಿಸಿದ್ದರು. ಖುಷ್ಬೂ ಅವರ ಬಂಧನದ ಬೆನ್ನಲ್ಲೇ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆಟಿ ರಾಘವನ್ ಅವರನ್ನು ಮೇಲ್ಮರುವಥುರ್ ಸಮೀಪದ ಅಥುರ್ ಟೋಲ್‌ಗೇಟ್‌ನಲ್ಲಿ ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮದಿಂದ ಅವರನ್ನು ಬಂಧಿಸಲಾಗಿದ್ದು, ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.