ಜಿ 20- ಕೃಷಿ ಮಂತ್ರಿಗಳ ಸಮ್ಮೇಳನದಲ್ಲಿ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಹೈದರಾಬಾದ್: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಹೈದರಾಬಾದಿನಲ್ಲಿ ನಡೆಯುತ್ತಿರುವ ಜಿ 20- ಕೃಷಿ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು.

ಭಾರತದ ಸಾರಥ್ಯದಲ್ಲಿ ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಿ20 ಶೃಂಗ ಸಭೆಯು ಭಾರತದಲ್ಲಿ ನಡೆಯುತ್ತಿದೆ.

3 ದಿನಗಳ ಕಾಲದ ಸಭೆಯಲ್ಲಿ ಜಿ20 ರಾಷ್ಟ್ರಗಳ ಕೃಷಿ ಸಚಿವರು ಹಾಗೂ ಕೃಷಿ ಕ್ಷೇತ್ರದ ಪರಿಣಿತರು ಮತ್ತು ವಿವಿಧ ರಾಷ್ಟ್ರಗಳ 200 ರಕ್ಕೂ ಅಧಿಕ ವಿಶೇಷ ಆಹ್ವಾನಿತ ಗಣ್ಯರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.