ಅಂಬೇಡ್ಕರ್ ಜಯಂತಿ: ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ‘ಸ್ವಚ್ಛತಾ ಸೈನಿಕರಿಗೆ ಸನ್ಮಾನ’ ಕಾರ್ಯಕ್ರಮ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠ ಮತ್ತು ಜಿಲ್ಲಾ ಮೀನುಗಾರರ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ನಗರಸಭಾ ‘ಸ್ವಚ್ಛತಾ ಸೈನಿಕರಿಗೆ ಸನ್ಮಾನ’ ಕಾರ್ಯಕ್ರಮವು ಉಡುಪಿ ನಗರಸಭೆಯ ಪರಿಸರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅಂಬೇಡ್ಕರ್ ರವರ ತತ್ವಾದರ್ಶಗಳು ಎಂದೆಂದಿಗೂ ಅತ್ಯಂತ ಪ್ರಸ್ತುತ. ಸಾಮಾಜಿಕ ಪ್ರಜಾಪ್ರಭುತ್ವ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂಬ ಅವರ ವಿಚಾರಧಾರೆಗೆ ಒತ್ತು ನೀಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಂಬೇಡ್ಕರ್ ರವರ ಜೀವನದ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥ ಯೋಜನೆಯಡಿ ಅಭಿವೃದ್ಧಿ ಪಡಿಸಿದೆ. ಸಾಮಾಜಿಕ ನ್ಯಾಯಕ್ಕಾಗಿ ಅವಿರತ ಹೋರಾಡಿದ ಮಹಾನ್ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯಗಳು ಸರಕಾರದ ಜನಪರ ಯೋಜನೆಗಳ ಮೂಲಕ ಸಾಕಾರಗೊಳ್ಳಲು ಎಲ್ಲರ ಸಂಘಟಿತ ಪ್ರಯತ್ನದ ಅಗತ್ಯವಿದೆ.ಅಂಬೇಡ್ಕರ್ ಜಯಂತಿ ಹಾಗೂ ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ಸ್ವಚ್ಛತಾ ಸೈನಿಕರನ್ನು ಗೌರವಾಧರದಿಂದ ಸನ್ಮಾನಿಸುವುದು ಅತ್ಯಂತ ಪ್ರಶಂಸನೀಯ ಎಂದರು.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು 130ಕ್ಕೂ ಮಿಕ್ಕಿರುವ ಪೌರ ಕಾರ್ಮಿಕರ ಪ್ರತಿನಿಧಿಗಳಾಗಿ ಹಿರಿಯ ಐದು ಮಂದಿ ಸ್ವಚ್ಛತಾ ಸೇನಾನಿಗಳಾದ ಶಾಂತ, ಲಕ್ಷ್ಮಣ, ತೇಜಪ್ಪ, ಪುಷ್ಪ, ಶಾಮ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತ ಉದಯಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಂಚಾಲಕ ಪಾಂಡುರಂಗ ಲಾಗ್ವಾಂಕರ್, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಬುದ್ದರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಮತ್ತು ಜಿಲ್ಲಾ ಕೆಡಿಪಿ ಸಮಿತಿ ಸದಸ್ಯೆ ನಿರಜಾ ಯು. ಶೆಟ್ಟಿ, ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯರಾದ ಮದ್ವೇಶ್ ಮಣಿಪಾಲ, ಉದಯ ಕುಮಾರ್ ಉಚ್ಚಿಲ, ಆನಂದ ಗಾಣಿಗ, ಶೋಭಾ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಮತ್ತು ಪೌರ ಕಾರ್ಮಿಕರು ಉಪಸ್ಥಿತರಿದ್ದರು.