ಅನಿರುದ್ಧ್ ನಾಯಕ ನಟನಾಗಿ ಕಾಣಿಸಿಕೊಳ್ಳಲಿರುವ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ 

ಬೆಂಗಳೂರು : ಅನಿರುದ್ಧ್ ಜಟ್ಕರ್ ನಾಯಕ ನಟನಾಗಿ ಅಭಿನಯಿಸಿರುವ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ ಗುರುವಾರದಂದು ನಡೆಯಿತು.

ರಾಚೆಲ್ ಡೇವಿಡ್ ಹಾಗೂ ನಿಧಿ ಸುಬ್ಬಯ್ಯ ಈ ಚಿತ್ರದ ನಾಯಕಿಯರು. ಆನಂದ್ ರಾಜ್ ಕಥೆ ಬರೆದಿದ್ದು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆಯುತ್ತಿದ್ದಾರೆ. ಸರ್ವೋತ್ತಮ್ ರಾಜು ನಿರ್ಮಾಪಕರಾಗಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಕುಸುಗೊಳ್ಳಿ ಡಿ.ಐ. (ವಿಕ್ರಾಂತ್ ರೋಣ ಖ್ಯಾತಿ), ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ನೃತ್ಯ ನಿರ್ದೇಶನವಿರುವ ಈ ಚಿತ್ರದ ಸೌಂಡ್ ಡಿಸೈನರ್ ಆಗಿ ಬಿ.ಆರ್ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಚಿತ್ರಕ್ಕೆ ಅಭಿಮಾನಿಗಳ ಆಶೀರ್ವಾದ ಹಾಗೂ ಹಾರೈಕೆ ಇರಲಿ ಎಂದು ಅನಿರುದ್ಧ್ ಹೇಳಿದ್ದಾರೆ.