ಕನ್ನಡ ಪುಸ್ತಕ ಪ್ರಾಧಿಕಾರದ 2021 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟನೆ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ 2021 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಶನಿವಾರ ಪ್ರಕಟಿಸಿದರು.

2021 ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತರು: ಅತ್ಯುತ್ತಮ ಪ್ರಕಾಶನ ಪ್ರಶಸ್ತಿ- ಬೆಂಗಳೂರು ರಾಷ್ಟ್ರೋತ್ಥಾನ ಸಾಹಿತ್ಯ, ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ- ಧಾರವಾಡದ ಡಾ. ಗುರುಲಿಂಗ ಕಾಪಸೆ, ಡಾ. ಜೆ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ- ಮೂಡಬಿದರೆಯ ಡಾ. ಮೋಹನ ಆಳ್ವ ಹಾಗೂ ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ- ಬೆಂಗಳೂರಿನ ಡಾ.ನಾ ಸೋಮೇಶ್ವರ.

ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳ ವಿವರ: ಸಂಪಾದಕ ಡಾ. ಟಿ.ಆರ್. ಅನಂತರಾಮು ಹಾಗೂ ಡಾ. ನಾ. ಸೋಮೇಶ್ವರ ಅವರ ನಮ್ಮ ದೇಹದ ವಿಜ್ಞಾನ ಕೃತಿಗೆ ಪುಸ್ತಕ ಸೊಗಸು ಮೊದಲನೇ ಬಹುಮಾನ, ಸಂಪಾದಕಿ ಉದ್ಯಾವರ ವಿಜಯಲಕ್ಷ್ಮಿ ಶೆಣೈ ಇವರ ಅಜ್ಜಿ ಮನೆ ಸವಿ ಕೃತಿಗೆ ಪುಸ್ತಕ ಸೊಗಸು ಎರಡನೇ ಬಹುಮಾನ, ಲೇಖಕ ಪ್ರಭುಚನ್ನಬಸವ ಸ್ವಾಮೀಜಿ ಇವರ ಮಹಾತ್ಮರ ಚರಿತಾಮೃತ ಕೃತಿಗೆ ಪುಸ್ತಕ ಸೊಗಸು ಮೂರನೇ ಬಹುಮಾನ, ಲೇಖಕ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಇವರ ನೋಟ್‌ಬುಕ್ – ಮಕ್ಕಳ ಕಥೆಗಳು ಕೃತಿಗೆ ಮಕ್ಕಳ ಪುಸ್ತಕ ಸೊಗಸು ಬಹುಮಾನ, ಲೇಖಕ ಡಾ. ಮುಜಾಫರ್ ಅಸ್ಸಾದಿ ಅವರ ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ ಕೃತಿಗೆ ಮುಖಪುಟ ಚಿತ್ರ ವಿನ್ಯಾಸ ಬಹುಮಾನ, ಲೇಖಕ ಬೇಲೂರು ರಘುನಂದನ್ ಅವರ ರೂಬಿಕ್ಸ್ ಕ್ಯೂಬ್ ಮತ್ತಿತರ ನಾಟಕಗಳು ಕ್ಲೀನ್ ಅಂಡ್ ಕ್ಲಿಯರ್ ಪಾಯಖಾನೆ ಮತ್ತು ಆಯಾಮ ಕೃತಿಗೆ ಮುಖಪುಟ ಚಿತ್ರ ಕಲೆಯ ಬಹುಮಾನ ಹಾಗೂ ಲೇಖಕ ಶಿ.ರಾ. ಹೂಗಾರ ಇವರ ಸಿರಿ ಬೆಳಕು ಕೃತಿಗೆ ಪುಸ್ತಕ ಮುದ್ರಣ ಸೊಗಸು ಬಹುಮಾನ ಪ್ರಕಟಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.