ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಮಹೋತ್ಸವ ಸಂಪನ್ನ

ಪಡುಬಿದ್ರಿ: ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಶ್ರೀ ಮನ್ಮಹಾರಥೋತ್ಸವು ಏಪ್ರಿಲ್ 19 ರಂದು ಸಂಪನ್ನಗೊಂಡಿತು.

ಬೆಳಿಗ್ಗೆ ರಥಾರೋಹಣ, ಬಳಿಕ ಮಹಾ ಅನ್ನಸಂತರ್ಪಣೆ, ಸಂಜೆ ಸ್ಯಾಕ್ಸೋಫೋನ್ ಕಛೇರಿ, ರಾತ್ರಿ ರಥೋತ್ಸವ, ಉತ್ಸವ ಬಲಿ, ಮಹಾರಂಗಪೂಜೆ, ಶ್ರೀ ಭೂತಬಲಿ, ಶಯನೋತ್ಸವ ನಡೆಯಿತು.

ಪರ್ಯಾಯ ತಂತ್ರಿ ವೇ.ಮೂ. ಬೆಟ್ಟಿಗೆ ವೆಂಕಟರಾಜ ತಂತ್ರಿ ಅವರ ಮಾರ್ಗದರ್ಶನದಲ್ಲಿ ಸರದಿ ಅರ್ಚಕರಾದ ವೇ.ಮೂ. ಶ್ರೀನಿವಾಸ ಭಟ್, ವೇ.ಮೂ. ವೆಂಕಟೇಶ ಭಟ್, ವೇ.ಮೂ. ಗುರುರಾಜ ಭಟ್ ಅವರ ಅರ್ಚಕತ್ವದಲ್ಲಿ ಪವಿತ್ರಪಾಣಿ ಕೆ.ಎಲ್. ಕುಂಡಂತಾಯ ಅವರ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಗದೀಶ ಅರಸ ಇರಂದಾಡಿ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರಾದ ವೆಂಕಟೇಶ್ ಭಟ್, ಜೆನ್ನಿ ನರಸಿಂಹ ಭಟ್, ಅರುಣಾಕರ ಶೆಟ್ಟಿ ಕಳತ್ತೂರು, ಕುತ್ಯಾರು ಪ್ರಸಾದ್ ಶೆಟ್ಟಿ, ಸುಜಾತಾ ಆರ್. ಶೆಟ್ಟಿ, ಕುಶಲ ದೇವಾಡಿಗ, ದಿವ್ಯಾ ಸುವರ್ಣ, ಕೆ. ಕೊರಗ, ಎಲ್ಲೂರು ಗ್ರಾ.ಪಂ. ಅಧ್ಯಕ್ಷ ಜಯಂತ್ ಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.