ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತದ ವಾರ್ಷಿಕ ಮಹಾಸಭೆ: ಶೇ.10 ಡಿವಿಡೆಂಟ್‌ ಘೋಷಣೆ

ಗಣಿತನಗರ: ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತ ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ನಡೆಯಿತು. ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷ ಸಾಹಿತ್ಯ ಇವರು ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೈಲೇಶ್‌ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮತ್ತು ಆರ್ಥಿಕ ತಖ್ತೆಗಳನ್ನು ಸಭೆಯಲ್ಲಿ ಮಂಡಿಸಿದರು.

ನಿರ್ದೇಶಕರಾದ ಶಾಂತಿರಾಜ್‌ ಹೆಗ್ಡೆ, ಅನಿಲ್‌ ಕುಮಾರ್‌ ಜೈನ್‌, ರವಿ.ಜಿ., ಮಂಜುನಾಥ್‌ ಮುದ್ರಾಡಿ, ಅರುಣ್‌ ಕುಮಾರ್‌, ಉಮೇಶ್‌ ಶೆಟ್ಟಿ, ಶ್ರೀಕಾಂತ್‌ ಮತ್ತು ನಿತೇಶ್‌.ಎಂ.ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು.

ಸಹಕಾರಿಯ ಉಪಾಧ್ಯಕ್ಷ ಡಾ.ಸತೀಶ್‌ ಶೆಟ್ಟಿಯವರು ಸ್ವಾಗತಿಸಿ, ನಿರ್ದೇಶಕಿ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ ವಂದಿಸಿ, ಸಂತೋಷ್‌ ನೆಲ್ಲಿಕಾರು ಕಾರ್ಯಕ್ರಮ ನಿರೂಪಿಸಿದರು.