ಆದಿವಾಸಿ ಆರೋಗ್ಯ ಸಂಯೋಜಕಿ ಹಾಗೂ ಕಾರ್ಯಕರ್ತೆ ಹುದ್ದೆಗಾಗಿ ಬುಡಕಟ್ಟು ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ವತಿಯಿಂದ ಬುಡಕಟ್ಟು ಅರೋಗ್ಯ ಸಂಚರಣೆ ಮಾದರಿ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು -1 ಹುದ್ದೆ ಮತ್ತು ಕಾರ್ಕಳ ಹಾಗೂ ಕುಂದಾಪುರ ತಾಲೂಕುಗಳಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ತಲಾ 1 ಹುದ್ದೆಗಳ ನೇಮಕಾತಿಗಾಗಿ ನರ್ಸಿಂಗ್ ತರಬೇತಿ ಪಡೆದ ಅರ್ಹ ಬುಡಕಟ್ಟು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಐ.ಟಿ.ಡಿ.ಪಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.