ಸಾಹಿತ್ಯ ಕಮ್ಮಟ ನಡೆಸಲು ಅರ್ಜಿ ಆಹ್ವಾನ

ಉಡುಪಿ, ಮೇ 05 (ಕವಾ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ಸಂತ ಸಾಹಿತ್ಯ ಅಧ್ಯಯನ ಶಿಬಿರ ಎಂಬ ರಾಜ್ಯ ಮಟ್ಟದ 5 ದಿನಗಳ ಕಮ್ಮಟ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ http://sahithyaacademy.karnataka.gov.in ಅನ್ನು ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್, ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.