ಬ್ರಹ್ಮಾವರ: ಎಡಬೆಟ್ಟಿನಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಬ್ರಹ್ಮಾವರ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಬ್ರಹ್ಮಾವರ ತಾಲೂಕು ಮೂಡಹಡು ಗ್ರಾಮದ ಎಡಬೆಟ್ಟು ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರದ ಸ್ವಾಮ್ಯದ ನಿಗಮ/ ಉದ್ಯಮ ಅಥವಾ ಕಂಪೆನಿಗಳು ಅಥವಾ ಗ್ರಾಮ ಪಂಚಾಯತಿಗಳು, ನಗರ ಸ್ಥಳೀಯ ಸಂಸ್ಥೆಗಳು, ಸಂಘಗಳು, ತಾಲೂಕು ಕೃಷಿ ಪ್ರಾಥಮಿಕ ಸಂಘಗಳು, ಸಹಕಾರ ಮಾರಾಟ ಸಂಘಗಳು, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವಿ.ಎಸ್.ಎಸ್.ಎನ್, ಹಾಪ್‌ಕಾಮ್ಸ್, ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಗ್ರಾಹಕ ಸಹಕಾರ ಸಂಘ, ಲ್ಯಾಂಪ್ಸ್ (ಆದಿವಾಸಿಗಳ ವಿವಿದ್ಧೋದ್ದೇಶ ಸಂಘ), ನೋಂದಾಯಿತ ನೇಕಾರರ ಸಹಕಾರ ಸಂಘ, ನೋಂದಾಯಿತ ಮಹಿಳಾ ವಿವಿದ್ಧೋದ್ದೇಶ ಸಹಕಾರ ಸಂಘ, ನೋಂದಾಯಿತ ವಿವಿದ್ಧೋದ್ದೇಶ ಸಹಕಾರ ಸಂಘ, ಅಂಗವಿಕಲರ ಕಲ್ಯಾಣ ಸಹಕಾರ ಸಂಘ,
ಸಹಕಾರ ಸಂಘ ಅಥವಾ ಸಹಕಾರಿ ಬ್ಯಾಂಕ್ ನಡೆಸುತ್ತಿರುವ ಬ್ಯಾಂಕ್‌ಗಳು, ವೈಯಕ್ತಿಕವಾಗಿ ಅಂಗವಿಕಲ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ವರ್ಗದ ಅರ್ಹ ವ್ಯಕ್ತಿಗಳು ಮತ್ತು ಕನಿಷ್ಠ 3 ವರ್ಷಗಳಿಂದ ಅಸ್ತಿತ್ವದಲ್ಲಿರುವ ಹಾಗೂ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಎರಡು ಲಕ್ಷ ರೂ. ಕನಿಷ್ಠ ಬ್ಯಾಲೆನ್ಸ್ ಹೊಂದಿರುವ ಸಂಘಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574947, ಬ್ರಹ್ಮಾವರ ತಾಲೂಕು ಕಚೇರಿಯ ಆಹಾರ ನಿರೀಕ್ಷಕರು ಮೊ.ನಂ: 9900410367 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.