ಉಡುಪಿ : ಅಗಸ ಮತ್ತು ಕ್ಷೌರಿಕ ವೃತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ಲಾಕ್ಡೌನ್ ಕಾರಣ ನೀಡಲಾಗುವ 5000 ರೂ ಗಳ ಪರಿಹಾರ ನೆರವು ನೀಡಲು , ಸೇವಾಸಿಂದು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ್ದ ದಿನಾಂಕವನ್ನು ಜುಲೈ 10 ರ ವರೆಗೆ ವಿಸ್ತರಿಸಲಾಗಿದ್ದು, ಫಲಾನುಭವಿಗಳು ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ