ಭಾರೀ ಮಳೆ: ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಆಸುಪಾಸಿನ ಪ್ರದೇಶಗಳು ಸಂಪೂರ್ಣ ಮುಳುಗಡೆ

ಉಡುಪಿ: ಕಳೆದ 2-3 ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಆಸುಪಾಸಿನ ಪ್ರದೇಶಗಳಾದ ಬೈಲಕರೆ ಹಾಗೂ ಕಲ್ಸಂಕ ಹತ್ತಿರದ ಮನೆಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ನೇತೃತ್ವದಲ್ಲಿ ಸಹಾಯಕ ಅಗ್ನಿಶಾಮಕ ದಳದ ಅಧಿಕಾರಿ ಮೀರ್ ಮೊಹ್ಮದ್ ಗೌಸ್ ಹಾಗೂ ಸಿಬ್ಬಂದಿಗಳ ಸಹಾಯದಿಂದ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕುಂಜಿಬೆಟ್ಟು ನಗರಸಭಾ ಸದಸ್ಯ ಗಿರೀಶ್ ಅಂಚನ್, ಮಾಜಿ ನಗರಸಭಾ ಸದಸ್ಯ ಶಶಿರಾಜ್ ಕುಂದರ್, ಆರ್.ಕೆ ರಮೇಶ್ ಪೂಜಾರಿ, ಶಿವಳ್ಳಿ ಗ್ರಾಮ ಲೆಕ್ಕಿಗ ಪ್ರಮೋದ್ ಹಾಗೂ ಪ್ರದೀಪ್ ಶೇರಿಗಾರ್, ಸುನಿಲ್ ಬೈಲಕರೆ, ಸಂದೇಶ್ ದೇವಾಡಿಗ, ಪ್ರಣಮ್, ಸುಹಾಸ್, ಸಂಪತ್, ರಾಘವೇಂದ್ರ ಹಾಗೂ ಸಂಜಯ್ ಆಚಾರ್ಯ ಅವರು ಉಪಸ್ಥಿತರಿದ್ದು ಸಹಾಯಹಸ್ತ ನೀಡಿದರು.