ಬಿಜೆಪಿ ಹಿರಿಯ ನಾಯಕ ಅರುಣ್‌ ಜೇಟ್ಲಿ ನಿಧನಕ್ಕೆ ಶಾಸಕ ವೇದವ್ಯಾಸ ಕಾಮತ್ ಸಂತಾಪ

ಮಂಗಳೂರು: ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್‌ ಜೇಟ್ಲಿ ನಿಧನಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸಂತಾಪ ಸೂಚಿಸಿದ್ದಾರೆ.
ಬಿಜೆಪಿಯ ಅತ್ಯಂತ ಪ್ರಭಾವಿ ಹಾಗೂ ಚಾಣಾಕ್ಷ ರಾಜಕಾರಣಿ ಅರುಣ್‌ ಜೇಟ್ಲಿ. ಅವರು ದೇಶಕಂಡ ಅಪರೂಪದ ರಾಜಕಾರಣಿಯಾಗಿದ್ದರು. ಅರುಣ್ ಜೇಟ್ಲಿಯವರ ಸಾವು ನಮಗೆಲ್ಲಾ ಆಘಾತ ಉಂಟುಮಾಡಿದೆ. ಪ್ರಭಾವಿ ರಾಜಕಾರಣಿಯನ್ನು ಕಳೆದುಕೊಂಡು ರಾಷ್ಟ್ರ ಸೇರಿದಂತೆ ಪಕ್ಷಕ್ಕೂ ನಷ್ಟ ಆಗಿದೆ. ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಭಗವಂತ ನೀಡಲಿ ಎಂದವರು ತಿಳಿಸಿದ್ದಾರೆ
ಅರುಣ್ ಜೇಟ್ಲಿ ಪಕ್ಷಾತೀತವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ವ್ಯಕ್ತಿ. ಭಾರತದ ರಾಜಕಾರಣಕ್ಕೆ ಜೇಟ್ಲಿಯವರ ಕೊಡುಗೆ ಅಪಾರ. ಜೇಟ್ಲಿ ಅವರು ಬಿಜೆಪಿಗೆ ನೀಡಿರುವ ಸೇವೆಯನ್ನು ಯಾರೂ ಮರೆಯಲಾಗದು. ಇಂದಿನ ರಾಜಕಾರಣಿಗಳಿಗೆ ಅವರು ಸ್ಫೂರ್ತಿಯಾಗಿದ್ದಾರೆ  ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಸಂತಾಪ ಸೂಚಿಸಿದ್ದಾರೆ.