ಸಾಣೂರು ಯುವಕ ಮಂಡಲ ವಾಲಿಬಾಲ್ ಪಂದ್ಯಾಟ: ಅಶ್ವಿನಿ ಆರೇಂಜರ್ಸ್ಸ್ ತಂಡಕ್ಕೆ ಸಮಗ್ರ ಪ್ರಶಸ್ತಿ, ಶ್ರೀದೇವಿ ಕಜೆ ತಂಡಕ್ಕೆ ರನ್ನರ್ ಅಪ್ ಪ್ರಶಸ್ತಿ

ಕಾರ್ಕಳ: ಸಾಣೂರು ಯುವಕ ಮಂಡಲದ ಆಶ್ರಯದಲ್ಲಿ ಫಿಟ್ ಇಂಡಿಯಾ ಸರಣಿ ಕಾರ್ಯಕ್ರಮದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ 12 ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟದಲ್ಲಿ ಅಶ್ವಿನಿ ಆರೇಂಜರ್ಸ್ಸ್ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ. ಶ್ರೀದೇವಿ ಕಜೆ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಬ್ಯಾಂಕ್ ಆಫ್ ಬರೋಡಾದ ಅಧಿಕಾರಿ ಮಧುಸೂಧನ್ ರೈ, ಸೋಲು ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಿದಾಗ ಯಶಸ್ಸು ಸಾಧ್ಯ ಎಂದರು.

ಮಂಡಲ ಮಹಾ ಪೋಷಕ ಸದಸ್ಯ ಸತ್ಯಾರ್ಥಿ ರಾವ್ ಶುಭಹಾರೈಸಿದರು. ಮಂಡಲ ಅಧ್ಯಕ್ಷ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಮಹೇಶ್ ಕುಮಾರ್, ಜಗದೀಶ್ ಕುಮಾರ್, ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ, ಪದಾಧಿಕಾರಿಗಳಾದ ಅನಿಲ್ ಕೋಟ್ಯಾನ್, ಪ್ರಕಾಶ್ ರಾವ್, ರಾಜೇಶ್, ಶರತ್, ಪ್ರಖ್ಯಾತ್, ಸುಮಂತ್, ಸಮಿತ್ ದಿಲೀಪ್, ಕ್ರೀಡಾ ಕಾರ್ಯದರ್ಶಿಗಳಾದ ಹರೀಶ್ ರಾವ್, ರೋಹಿತ್ ಉಪಸ್ಥಿತರಿದ್ದರು. ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಬಹುಮಾನಗಳ ಪಟ್ಟಿ ವಾಚಿಸಿದರು. ಕಾರ್ಯದರ್ಶಿ ಮೋಹನ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.