ಜ. 29 ರಂದು ಶಿವಪಾಡಿ ದೇವಸ್ಥಾನದಲ್ಲಿ ಅತಿರುದ್ರ ಯಾಗ ಸಂಕಲ್ಪ ದಿವಸ್ ಹಾಗೂ ಮೃತ್ತಿಕಾ ಪೂಜೆ

ಮಣಿಪಾಲ: ಇಲ್ಲಿನ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.22 ರಿಂದ ಮಾ.5 ರವರೆಗೆ ಅತಿರುದ್ರ ಯಾಗ ನಡೆಯಲಿದ್ದು, ಜ. 29 ರಂದು ಬೆಳಿಗ್ಗೆ ಅತಿರುದ್ರ ಯಾಗ ಸಂಕಲ್ಪ ದಿವಸ್ ಮತ್ತು ಮೃತ್ತಿಕಾ ಪೂಜೆಯನ್ನು ಸಾಮೂಹಿಕವಾಗಿ ಆಚರಿಸಲಾಗುತ್ತದೆ.

ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿ, ಶ್ರೀ ವಿಧುಶೇಖರ ಭಾರತೀ ಸ್ವಾಮಿಜಿಯವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ದೇಗುಲದಲ್ಲಿ ಪ್ರಾರ್ಥನೆ, ಯಾಗಶಾಲೆಯ ಭೂಮಿ ಪೂಜೆ, ಪುಣ್ಯತೀರ್ಥ ಕ್ಷೇತ್ರಗಳಿಂದ ತಂದ ಮೃತ್ತಿಕಾ ವಿತರಣೆ, ಸಾಮೂಹಿಕ ದೀಕ್ಷಾ ಸಂಕಲ್ಪ ರುದ್ರಾಕ್ಷಿ ಧಾರಣೆಯ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭೆಯ ಸಂಕಲ್ಪ ದಿವಸ್ ಕಾರ್ಯಕ್ರಮವನ್ನು ಕಲ್ಲಡ್ಕ ಡಾ ಪ್ರಭಾಕರ್ ಭಟ್ ಉದ್ಘಾಟಿಸಲಿದ್ದು, ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್ ಬಲ್ಲಾಳ್, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ.ಜಿ.ಶಂಕರ್, ಶ್ರೀಕ್ಷೇತ್ರ ಶೃಂಗೇರಿ ಪ್ರಾಂತೀಯ ಧರ್ಮಾಧಿಕಾರಿ ವಾಗೀಶ್ ಶಾಸ್ತ್ರಿ, ಆರ್.ಎಸ್.ಎಸ್ ಜಿಲ್ಲಾ ಸಂಘ ಚಾಲಕ ಡಾ. ನಾರಾಯಣ ಶೆಣೈ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಬೆಂಗಳೂರು, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಉಜ್ವಲ್ ಡೆವೆಲಪರ್ಸ್ ಎಂಡಿ ಪುರುಷೋತ್ತಮ ಪಿ. ಶೆಟ್ಟಿ, ಡಾ.ಕೆ ಕೃಷ್ಣಪ್ರಸಾದ್, ಬಾಲಕೃಷ್ಣ ಭಂಡಾರಿ ಮುಂಬಯಿ, ಅರುಣ್ ಕುಮಾರ್ ಉಡುಪಿ, ಪರ್ವತ್ ಶೆಟ್ಟಿ ಮುಂಬಯಿ, ಕಾರ್ತಿಕ್ ಆರ್ ನಾಯಕ್ ಕುಂದಾಪುರ, ಶ್ರೀನಿವಾಸ ಪೂಜಾರಿ, ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ದೇವಸ್ಥಾನ್ದ ಅಭಿವೃದ್ದಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್ ತಿಳಿಸಿದ್ದಾರೆ.