ದುಷ್ಕರ್ಮಿಗಳಿಂದ ಫೋಟೋಗ್ರಾಫರ್ ಮೇಲೆ ತಲವಾರಿನಿಂದ ದಾಳಿ

ಮಂಗಳೂರು: ಸ್ಟುಡಿಯೋ‌ ಒಂದರೊಳಗೆ ಏಕಾಏಕಿಯಾಗಿ ನುಗ್ಗಿದ ದುಷ್ಕರ್ಮಿಗಳು ಸ್ಟುಡಿಯೋ ಮಾಲೀಕನಿಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ.

ಫರಂಗಿಪೇಟೆಯ ಆಶಾ ಸ್ಟುಡಿಯೋ ಮಾಲೀಕ, ಫೊಟೋಗ್ರಾಫರ್ ದಿನೇಶ್ ಕೊಟ್ಟಿಂಜ ಎಂಬುವವರು ದುಷ್ಕರ್ಮಿಗಳಿಂದ ಹಲ್ಲೆಗೊಳಗಾದವರು. ಇಂದು ರಾತ್ರಿ 8 ಗಂಟೆಯ ಸುಮಾರಿಗೆ ಸ್ಟುಡಿಯೋ ಒಳಗೆ ನುಗ್ಗಿದ ದುಷ್ಕರ್ಮಿಗಳ ತಂಡವು ದಿನೇಶ್ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದು, ಇದರಿಂದ ದಿನೇಶ್ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ವೃತ್ತ ನಿರೀಕ್ಷಕ ಟಿ‌.ಡಿ. ನಾಗರಾಜ್, ಎಸ್. ಐ.ಪ್ರಸನ್ನ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.