ಹೆಚ್.​ಡಿ. ಕುಮಾರಸ್ವಾಮಿ, ಸಂಬಂಧಿಕರಿಂದ ಒತ್ತುವರಿ ಜಮೀನು ವಶಕ್ಕೆ ಪಡೆದ ವರದಿ ಸಲ್ಲಿಕೆಗೆ ಕಾಲಾವಕಾಶ ನೀಡಿದ ಸರ್ಕಾರ

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಇತರರಿಂದ ಒತ್ತುವರಿಯಾಗಿದ್ದ ಸರ್ಕಾರಿ ಜಮೀನು ವಶಕ್ಕೆ ಪಡೆಯುವ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್ ಸರ್ಕಾರಕ್ಕೆ ನಿಗದಿತ ಕಾಲಾವಕಾಶ ನೀಡಿದೆ. ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಕುಟುಂಬಸ್ಥರಿಂದ ಕಬಳಿಕೆಯಾಗಿದ್ದ ಒತ್ತುವರಿ ಜಮೀನು ವಶಕ್ಕೆ ಪಡೆಯಲು ಸೂಚಿಸಿದ್ದ ಹೈಕೋರ್ಟ್ ಆದೇಶ ಜಾರಿಗೊಳಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ನೇತೃತ್ವದ ವಿಭಾಗೀಯ ಪೀಠ […]

ಕೇಂದ್ರದ ‘ಪ್ರಸಾದ್ ಯೋಜನೆ’ಗೆ ಒಪ್ಪಿಗೆ; ಚಾಮುಂಡಿ ಬೆಟ್ಟದಲ್ಲಿ ,ಧಾರ್ಮಿಕ ಕ್ಷೇತ್ರದಲ್ಲಾಗುವ ಅಭಿವೃದ್ಧಿಗಳೇನು?

ಮೈಸೂರು : ಪ್ರವಾಸೋದ್ಯಮ ಇಲಾಖೆಯಿಂದ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಪ್ರಸಾದ್ ಯೋಜನೆ ಜಾರಿಗೆ ತಂದಿದೆ.ಚಾಮುಂಡಿ ಬೆಟ್ಟದಲ್ಲಿ ಪ್ರಸಾದ್ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಗೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವಾಸಸ್ಥಾನ ಚಾಮುಂಡಿ ಬೆಟ್ಟ ಆಯ್ಕೆಯಾಗಿತ್ತು. ಬೆಟ್ಟವನ್ನು ಪ್ರಮುಖ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಂದಾಜು 45.75 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಆಡಳಿತಾತ್ಮಕವಾಗಿ ಕೇಂದ್ರ ಅನುಮೋದನೆ ನೀಡಿದೆ. ಈ ಹಿಂದೆ ಕೇಂದ್ರದ ಮಹತ್ವದ ಯೋಜನೆ ಪ್ರಸಾದ್‌ಗೆ […]

ಅಧಿಕಾರಿಗಳಿಗೆ 3 ತಿಂಗಳಲ್ಲಿ ಬೆಂಗಳೂರನ್ನು ಟ್ರಾಫಿಕ್‌ ಮುಕ್ತ ಸಿಟಿ ಮಾಡಿಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಗಡುವು

ಟ್ರಾಫಿಕ್‌ ಮುಕ್ತ ಸಿಟಿ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಬೆಂಗಳೂರು : ಬೆಂಗಳೂರು ನಗರ ಸಂಚಾರ ದಟ್ಟಣೆಯಿಂದ ವಿಶ್ವಮಟ್ಟದಲ್ಲಿ‌ ಅಪಖ್ಯಾತಿಗೆ ಒಳಗಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್‌ ಸುಧಾರಣೆಗೆ ಇದೇ ಮೊದಲ ಬಾರಿಗೆ ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ. ಇನ್ನೊಂದೆಡೆ, ಗೃಹ ಸಚಿವ ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಗಡುವು ವಿಧಿಸಿದ್ದಾರೆ. ಹೀಗಾಗಿ ನಗರ ಸಂಚಾರ ದಟ್ಟಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್‌ಮುಕ್ತ ನಗರ ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ […]

ಕೆ-ಸಿಇಟಿ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಹೆಮ್ಮಾಡಿ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ನಡೆಯುವ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆ ಕೆ-ಸಿಇಟಿ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಐಶ್ವರ್ಯ ಖಾರ್ವಿ B.sc Agri-450,BNYS-1050, ಇಂಜಿನಿಯರಿಂಗ್-1189 ರ‍್ಯಾಂಕ್‌ ಗಳನ್ನು, ನೇಶಲ್ -ಇಂಜಿನಿಯರಿಂಗ್ 1966ನೇ ರ‍್ಯಾಂಕ್‌, ಆಯುಷ್ ಜೆ.ಸಿ- ಇಂಜಿನಿಯರಿಂಗ್ – 2060ನೇ ರ‍್ಯಾಂಕ್‌, ತಿಲಕ್ ಇಂಜಿನಿಯರಿಂಗ್- 2500ನೇ ರ‍್ಯಾಂಕ್‌, ಧನುಷ್ಯ-ಇಂಜಿನಿಯರಿಂಗ್- 3958ನೇ ರ‍್ಯಾಂಕ್‌, ಸುಮಂತ್- ಇಂಜಿನಿಯರಿಂಗ್- 4062ನೇ ರ‍್ಯಾಂಕ್‌, ಓಂಕಾರ್ ಪ್ರಭು-ಇಂಜಿನಿಯರಿಂಗ್- 4203ನೇ ರ‍್ಯಾಂಕ್‌, ಸಂಪದ-ಇಂಜಿನಿಯರಿಂಗ್- 5620ನೇ ರ‍್ಯಾಂಕ್‌, ತನಿಷಾ-ಇಂಜಿನಿಯರಿಂಗ್- 5923ನೇ ರ‍್ಯಾಂ […]

ಮಹಾರಾಷ್ಟ್ರದ ಪ್ರಸಿದ್ಧ ದೇವಸ್ಥಾನದ 1,150 ಎಕರೆ ಭೂಮಿಯಲ್ಲಿ ರಾಜ್ಯ ವಿದ್ಯುತ್ ಉತ್ಪಾದನಾ ಕಂಪೆನಿ ವತಿಯಿಂದ ಸೌರಶಕ್ತಿ ಯೋಜನೆ

ಔರಂಗಾಬಾದ್ (ಮಹಾರಾಷ್ಟ್ರ): ನೆರೆ ರಾಜ್ಯ ಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ಪ್ರಸಿದ್ಧ ತುಳಜಾ ಭವಾನಿ ದೇವಸ್ಥಾನಕ್ಕೆ ಸೇರಿದ 1,150 ಎಕರೆ ಭೂಮಿಯಲ್ಲಿ ಸೌರಶಕ್ತಿ (ಸೋಲಾರ್) ಯೋಜನೆ ಸ್ಥಾಪಿಸಲು ನಿರ್ಧರಿಸಲಾಗಿದೆ.ಮಹಾರಾಷ್ಟ್ರದ ಪ್ರಸಿದ್ಧ ತುಳಜಾ ಭವಾನಿ ದೇವಸ್ಥಾನಕ್ಕೆ ಸೇರಿದ 1,150 ಎಕರೆ ಪ್ರದೇಶದಲ್ಲಿ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿ ಸೌರಶಕ್ತಿ ಘಟಕ ಸ್ಥಾಪಿಸಲು ಮುಂದಾಗಿದೆ. ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪೆನಿ (MAHAGENCO)ಯು 250 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಯ ಪ್ರಸ್ತಾಪನೆ ಸಲ್ಲಿಸಿದ್ದು, ಇದಕ್ಕೆ ದೇವಾಲಯದ ಟ್ರಸ್ಟ್‌ ಸಮಿತಿ ಎಂದು ಅನುಮೋದಿಸಿದೆ ಎಂದು […]