ಕಾಶೀಮಠಾಧೀಶರಿಂದ ಶ್ರೀಲಕ್ಷ್ಮೀ ವೆಂಕಟೇಶ್ವರನಿಗೆ ಮಹಾಪೂಜೆ

ಉಡುಪಿ: ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಸೋಮವಾರ ಬೆಳ್ಳಿಗೆ ಪ್ರಧಾನ ದೇವರರಾದ ಶ್ರೀಲಕ್ಷ್ಮೀ ವೆಂಕಟೇಶನಿಗೆ ಶ್ರೀ ಸಂಸ್ಥಾನ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಮಹಾಪೂಜೆ ನಡೆಸಿ ಆರತಿ ಬೆಳಗಿಸಿ ಬಳಿಕ ಭಕ್ತರಿಗೆ ಪ್ರಸಾದ ನೀಡಿ ಅನುಗ್ರಹಸಿದರು. ದೇವಳದ ಆಡಳಿತ ಮೊಕ್ತೇಸರ ಪಿ ವಿ ಶೆಣೈ , ಅರ್ಚಕ ಚೆಂಪಿ ಶ್ರೀಕಾಂತ್ ಭಟ್, ವಿನಾಯಕ ಭಟ್, ದೀಪಕ್ ಭಟ್, ಪುಂಡಲೀಕ ಕಾಮತ್ , ವಸಂತ್ ಕಿಣಿ, ರೋಹಿತಾಕ್ಷ ಪಡಿಯಾರ್, ಉಮೇಶ್ ಪೈ , ವಿಶಾಲ್ ಶೆಣೈ , ಸತೀಶ್ […]

ಕುಟುಂಬದ ಜೊತೆ ಪುನರ್ಮಿಲನದ ಭಾಗ್ಯ ಕಂಡ ಸ್ನೇಹಾಲಯದಲ್ಲಿದ್ದ ಚಿತ್ರದುರ್ಗದ ಹಿರಿಯೂರಿನ ಕೆಂಚಣ್ಣ

ಮಂಗಳೂರು: 19-01-2021 ರಂದು ಸ್ನೇಹಾಲಯದ ಸಂಸ್ಥಾಪಕ ಬ್ರದರ್ ಜೋಸೆಫ್ ಕ್ರಾಸ್ತಾ ಅವರು ಉಪ್ಪಳ, ಕಾಸರಗೋಡು ರಸ್ತೆಗಳಲ್ಲಿ ಅಲೆದಾಡುತ್ತಿದ್ದ ಕೆಂಚಣ್ಣ ಎಂಬ ವ್ಯಕ್ತಿಯನ್ನು ರಕ್ಷಿಸಿದ್ದರು. ಮಾನಸಿಕ ಅಸ್ವಸ್ಥತರಂತೆ ತೋರುತ್ತಿದ್ದ ಅವರು ಅತ್ಯಂತ ಹಿಂಸಾತ್ಮಕ ನಡವಳಿಕೆಯನ್ನು ಹೊಂದಿದ್ದರು. ಅನ್ನಾಹಾರವಿಲ್ಲದೆ ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ಕೆಂಚಣ್ಣನನ್ನು ಮುಂದಿನ ಆರೈಕೆ ಹಾಗೂ ಚಿಕಿತ್ಸೆಗಾಗಿ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಯಿತು. ಮನೋವೈದ್ಯಕೀಯ ಸಲಹೆಗಾರರು ಮತ್ತು ವೈದ್ಯಕೀಯ ತಂಡವು ಅವರಿಗೆ ಸೂಕ್ತ ಆರೈಕೆ ಮತ್ತು ಬೆಂಬಲವನ್ನು ನೀಡುವಲ್ಲಿ ಯಶಸ್ವಿಯಾಯಿತು. ಔಷಧಿಗಳ ಜೊತೆಗೆ, ವಿವಿಧ […]

ಪರಿಷ್ಕೃತ ಕೆ-ಸಿಇಟಿ ಫಲಿತಾಂಶ: ಜ್ಞಾನಸುಧಾ ಕಾಲೇಜಿಗೆ ಎರಡು ರ‍್ಯಾಂಕ್

ಕಾರ್ಕಳ : ಇತ್ತೀಚೆಗೆ ಹೊರಡಿಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ತಾಂತ್ರಿಕ ದೋಷದಿಂದ ಕೆಲ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು. ಆ ಪರಿಷೃತ ಫಲಿತಾಂಶವು ಪ್ರಕಟಗೊಂಡಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಿಶಾಂತ್ ಎನ್ ಹೆಗ್ಡೆ 1072(G55) ನೇ ರ‍್ಯಾಂಕ್ ಹಾಗೂ ಸಾತ್ವಿಕ್ ಬಿ.ಸಿ 1387(G55) ನೇ ರ‍್ಯಾಂಕ್ ಪಡೆಯುವುದರ ಮೂಲಕ ಜ್ಞಾನಸುಧಾದ 2 ಸಾವಿರದೊಳಗಿನ ರ‍್ಯಾಂಕ್‌ಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಜೊತೆಗೆ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೆ-ಸಿಇಟಿ ಇಂಜಿನಯರಿಂಗ್‌ನಲ್ಲಿ ಸಾವಿರದೊಳಗಿನ […]

ಜೆಇಇ ಅಡ್ವಾನ್ಸ್ಡ್: ಶ್ರೀ ವೆಂಕಟರಮಣ ಕಾಲೇಜಿನ ಪ್ರಣಮ್ಯ ಜಿ.ಎಚ್ ರಾಷ್ಟ ಮಟ್ಟದಲ್ಲಿ 2126 ನೇ ರ‍್ಯಾಂಕ್

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ ಜಿ.ಎಚ್ ರಾಷ್ಟ ಮಟ್ಟದಲ್ಲಿ ವರ್ಗವಾರು 2126 ನೇ ರ‍್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಾಪಸ್ ವಿರುದ್ದ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ; ಜಿಲ್ಲಾ ಬಿಜೆಪಿಯಿಂದ ಬೆಂಬಲ: ಕುಯಿಲಾಡಿ

ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜೂ.19 ಸೋಮವಾರ ಸಂಜೆ 4.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ, ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, […]