ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಇಂಡೋ-ಜರ್ಮನ್ ಶೈಕ್ಷಣಿಕ ಪಾಲುದಾರಿಕೆಯ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ
ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿಗುರುವಾರ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)ವನ್ನು ಉದ್ಘಾಟಿಸಲಾಯಿತು ಬೆಂಗಳೂರಿನ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್ ಆಕಿಮ್ ಬುರ್ಕಾರ್ಟ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾಹೆ ಸಂಸ್ಥೆಯು ಶಿಕ್ಷಣ, ಆರೋಗ್ಯ ಸೇವೆಯ ಶ್ರೇಷ್ಠತೆ ಮತ್ತು ಹೊಸ ಆವಿಷ್ಕಾರಗಳ ಕೇಂದ್ರವಾಗಿದೆ. ವೈದ್ಯಕೀಯ ಜ್ಞಾನವನ್ನು ಹೆಚ್ಚಿಸುವ ಬದ್ಧತೆಯೊಂದಿಗೆ, ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೈಕೆ ಮತ್ತು ಚಿಕಿತ್ಸೆ ನೀಡುತ್ತಿದೆ. […]
ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಜೀವನಮೌಲ್ಯ ಕಾರ್ಯಾಗಾರ
ಕಟಪಾಡಿ: ಜೂನ್ 5 ರಂದು ಇಲ್ಲಿನ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾಲೇಜಿನ ಸಿಬ್ಬಂದಿ ಶಶಿಕಿರಣ್ ಆಚಾರ್ಯ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿಯ ಅರಿವು ಮೂಡಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕುರಿತಾದ ಬೀದಿ ನಾಟಕವನ್ನು ಪ್ರದರ್ಶಿಸಿ ಮಕ್ಕಳಿಗೆ ಪರಿಸರ ರಕ್ಷಣೆ ಮಹತ್ವ ತಿಳಿಸಿದರು. ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿ.ಎ ಗೋಪಾಲಕೃಷ್ಣ ಭಟ್ ಹಾಗೂ ಪ್ರಾಧ್ಯಾಪಕರಿಗೆ ಗಿಡವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜು ಹಾಗು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರು, ಬೋಧಕ […]
ಪರ್ಸನಲೈಸ್ಡ್ ಲಾಕ್ಸ್ಕ್ರೀನ್, ವಿಜೆಟ್ಸ್ : ಆಯಪಲ್ iPadOS 17 ಲಾಂಚ್
ಕ್ಯಾಲಿಫೋರ್ನಿಯಾ (ಅಮೆರಿಕ): ಆಯಪಲ್ ತನ್ನ ಹೊಸ ಆಪರೇಟಿಂಗ್ ಸಿಸ್ಟಂ ಸಾಫ್ಟವೇರ್ iOS 17 ಅನ್ನು ಲಾಂಚ್ ಮಾಡಿದೆ. ಇದರಲ್ಲಿ ಹಲವಾರು ಆಕರ್ಷಕ ಹೊಸ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಹಲವಾರು ಹೊಸ ಫೀಚರ್ಗಳೊಂದಿಗೆ ಆಯಪಲ್ ತನ್ನ iPadOS 17 ಅನ್ನು ಲಾಂಚ್ ಮಾಡಿದೆ. ವರ್ಲ್ಡ್ವೈಡ್ ಡೆವಲಪರ್ಸ್ ಕಾನ್ಫರೆನ್ಸ್ -2023 ತಂತ್ರಜ್ಞಾನ ಸಮಾವೇಶದಲ್ಲಿ ಆಯಪಲ್ ಹೊಸ OS ಅನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾಗಿರುವ ಹೊಸ ಟ್ಯಾಬ್ಲೆಟ್ ಸಾಫ್ಟವೇರ್ ಅಪ್ಡೇಟ್ iOS 17 ನಲ್ಲಿರುವ ಹಲವಾರು ಫೀಚರ್ಗಳನ್ನೇ ಒಳಗೊಂಡಿರಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. […]
ಮಾರುಕಟ್ಟೆಗೆ ಬಂತು 5 ಬಾಗಿಲಿನ ಮಾರುತಿ ಸುಜುಕಿ ಜಿಮ್ನಿ: ದರ, ವಿಶೇಷತೆ ಹೀಗಿದೆ ನೋಡಿ
ಕಳೆದ ಕೆಲವು ತಿಂಗಳಿಂದ ಕಾರುಪ್ರಿಯರಲ್ಲಿ ಸಾಕಷ್ಟು ರೋಮಾಂಚನ, ನಿರೀಕ್ಷೆ ಹುಟ್ಟಿಸಿದ್ದ ಮಾರುತಿ ಸುಜುಕಿ ಜಿಮ್ನಿ ಕಾರು ಕೊನೆಗೂ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಜಿಮ್ನಿ ಎಸ್ಯುವಿ ಕಾರು ಬಿಡುಗಡೆಯಾಗಿದೆ. ಗ್ರಾಹಕರು ಆರ್ಡರ್ಗೆ ಮುಗಿಬೀಳುತ್ತಿದ್ದಾರೆ. ಅಂಥದ್ದೇನಿದೆ? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. ಹೊಚ್ಚ ಹೊಸ ಅತ್ಯಾಧುನಿಕ ವಾಹನದ ಬೆಲೆಗಳನ್ನು ಪ್ರಕಟಿಸಲಾಗಿದೆ. ಈಗಾಗಲೇ ಇದರ ಬುಕ್ಕಿಂಗ್ ಸಹ ಆರಂಭವಾಗಿದೆ. ಈವರೆಗೆ 30 ಸಾವಿರ ಆರ್ಡರ್ಗಳು ಬಂದಿವೆ ಎಂದು ತಿಳಿದುಬಂದಿದೆ. ಜಿಮ್ನಿ ಬೆಲೆ 12.74 ಲಕ್ಷ ರೂಪಾಯಿಯಿಂದ ಶುರುವಾಗಿ 15.05 […]
ತೋಳಿಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ: ಭಾರತ- ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್ಶಿಪ್
ಲಂಡನ್: ಲಂಡನ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಭಾರತ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇತ್ತೀಚಿನ ವರದಿಯಂತೆ ಆಸೀಸ್ ತಂಡ 5 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 13 ರನ್ ಗಳಿಸಿ ಆಡುತ್ತಿದೆ.ಬಹುನೀರೀಕ್ಷಿತ 2021-23 ರ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿವೆ. ಪ್ರತಿಷ್ಟಿತ ಪಂದ್ಯಕ್ಕೆ ಓವಲ್ ಮೈದಾನ ಆತಿಥ್ಯ ವಹಿಸಿದೆ. ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ದುಕೊಂಡಿದೆ. ಒಡಿಶಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರೈಲು […]