ಬಸ್ ಗಳಲ್ಲಿನ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಲು ಆರ್.ಟಿ.ಓ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಖಾಸಗಿ ಬಸ್ಸುಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ಗಳಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆ, ಪ್ರಕಟಣೆಯ ಏಳು ದಿನಗಳ ಒಳಗೆ ಬಸ್ಸುಗಳಲ್ಲಿನ ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಪರವಾನಿಗೆಯನ್ನು ಅಮಾನತುಗೊಳಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನ

ಉಡುಪಿ : ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯು ಅನುಷ್ಠಾನಗೊಂಡಿದ್ದು, 193 ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಉಳಿದ 25 ಪಂಚಾಯತ್ ವ್ಯಾಪ್ತಿಗಳಾದ ಹಾರಾಡಿ, ಚಾಂತಾರು, ವರಂಗ, ಬಡಾ, ಕಟಪಾಡಿ, ಪಡುಬಿದ್ರಿ, ಶಿರ್ವ, ಬೆಳ್ಮಣ್, ಬಸ್ರೂರು, ನಿಟ್ಟೆ, ಕುಕ್ಕುಂದೂರು, ಕಾಳಾವರ, ಅಮಾಸೆಬೈಲು, ಕೋಟೇಶ್ವರ, ಗಂಗೊಳ್ಳಿ, ತೆಂಕನಿಡಿಯೂರು, ಪೆರ್ಡೂರು, ಅಲೆವೂರು, ಉದ್ಯಾವರ, ಆರೂರು, ಕಾಂತಾವರ, ನಂದಳಿಕೆ, ಶಿರ್ಲಾಲು, ಯಡಮೊಗೆ ಹಾಗೂ ಬಳ್ಕೂರು ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು, ಸದರಿ ಬಾಕಿ ಕೇಂದ್ರಗಳ ಫ್ರಾಂಚೈಸಿ ಪಡೆಯಲು ಅರ್ಹ ಆಸಕ್ತ ಸಾರ್ವಜನಿಕರಿಂದ […]

ಉಸ್ತುವಾರಿ ಸಚಿವರಿಂದ ಬಾಲಕರ ಬಾಲ ಮಂದಿರ ಪರಿಶೀಲನೆ

ಉಡುಪಿ: ಉಡುಪಿಯ ದೊಡ್ಡಣಗುಡ್ಡೆಯಲ್ಲಿರುವ ಬಾಲಕರ ಬಾಲ ಮಂದಿರಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಮಂದಿರದಲ್ಲಿ ಮಕ್ಕಳ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಮಕ್ಕಳಿಗೆ ಯಾವುದೇ ರೀತಿಯ ಕುಂದುಕೊರತೆ ಹಾಗೂ ಸಮಸ್ಯೆಗಳಾಗಂತೆ ಎಚ್ಚರಿಕೆ ವಹಿಸುವಂತೆ ಮತ್ತು ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ […]

ಆಗಸ್ಟ್ 25 ರಂದು ತೆರೆಗೆ ಬರಲಿದ್ದಾನೆ ‘ಟೋಬಿ’: ಮಾರಿಗೆ ದಾರಿ ಮಾಡಿಕೊಡಿ ಎಂದ ರಾಜ್ ಬಿ ಶೆಟ್ಟಿ

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದಂತಹ ಆಫ್ ಬೀಟ್ ಸಿನಿಮಾಗಳನ್ನು ನೀಡಿ ಜನಮನ ಗೆದ್ದಂತಹ ರಾಜ್ ಬಿ ಶೆಟ್ಟಿ ಅವರ ಮುಂದಿನ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸೇಡಿನ ಕಥಾಹಂದರ ಹೊಂದಿರುವ ‘ಟೋಬಿ’ ಶೀರ್ಷಿಕೆಯ ಈ ಚಿತ್ರವನ್ನು ಬಾಸಿಲ್ ಅಲ್ಚಕ್ಕಲ್ ನಿರ್ದೇಶಿಸಲಿದ್ದಾರೆ. ಚಿತ್ರದ ಕಥೆಯನ್ನು ರಾಜ್ ಬಿ ಶೆಟ್ಟಿ ಬರೆದಿದ್ದು, ಮುಖ್ಯಭೂಮಿಕೆಯಲ್ಲಿ ಖುದ್ದು ಅಭಿನಯಿಸಲಿದ್ದಾರೆ. ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣವಿರುವ ಟೋಬಿಗೆ ಮಿಧುನ್ ಮುಕುಂದನ್ ಸಂಗೀತ ನೀಡಿದ್ದಾರೆ. ಒಂದು ಕುರಿಯ ಮೇಲೆ ತುಂಬಾ ಒತ್ತಡ […]

ಬಾಲ ಕಾರ್ಮಿಕ ಪದ್ಧತಿಯಿಂದ ಯುವ ಸಂಪತ್ತು ವ್ಯರ್ಥವಾಗಿ ದೇಶದ ಅಭಿವೃದ್ದಿಗೆ ತೊಡಕು: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿ ದಾರಿ ತಪ್ಪಲಿದ್ದು, ಇದರಿಂದ ದೇಶದ ಯುವ ಸಂಪತ್ತು ವ್ಯರ್ಥವಾಗುವುದರಿಂದ ದೇಶದ ಅಭಿವೃದ್ಧಿಗೆ ತೊಡಕಾಗಲಿದೆ. ಆದ್ದರಿಂದ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದಲ್ಲಿ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಸೋಮವಾರ ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ […]