ಕರ್ನಾಟಕ ಅಭಿಯೋಜಕ ಎಚ್.ಕೆ.ಜಗದೀಶ್ ಇವರಿಂದ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಕರ್ನಾಟಕ ಅಭಿಯೋಜಕರ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ನಿರ್ದೇಶಕ ಎಚ್.ಕೆ.ಜಗದೀಶ್ ಮತ್ತು ಉಡುಪಿಯ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಇವರು ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ , ಮಟ್ಟು ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು.

ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು

ಕಾರ್ಕಳ: ಭಾನುವಾರ ಸಂಜೆ ವ್ಯಕ್ತಿಯೊಬ್ಬರು ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಬಸ್ಸಿನ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯನ್ನು ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ. ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸಿಗೆ ತೆರಳಲು ಬಸ್ಸು ಹತ್ತುವ ಸಂದರ್ಭ ಆಯತಪ್ಪಿ ಬಿದ್ದು ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ತಕ್ಷಣವೇ ಅವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು, […]

ಭತ್ತದ ಮೋಟೆ ಹೊತ್ತಿದ್ದ ಲಾರಿ ಕಾರಿನ ಮೇಲೆ ಪಲ್ಟಿ: ಪ್ರಯಾಣಿಕರು ಪವಾಡ ಸದೃಶ ಪಾರು

ಪರ್ಕಳ: ಇಲ್ಲಿನ ರಸ್ತೆ ಅವ್ಯವಸ್ಥೆಯಿಂದಾಗಿ ಕೆಳಪರ್ಕಳದಲ್ಲಿ ಭತ್ತದ ಮೂಟೆಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಪ್ರವಾಸಿ ಕಾರುಗಳ ಮೇಲೆ ಪಲ್ಟಿಯಾಗಿದೆ. ಇದರಲ್ಲಿ ಒಂದು ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಲಾರಿಯಲ್ಲಿದ್ದ ಭತ್ತದ ಮೂಟೆಗಳು ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಪ್ರಯಾಣಿಕರು ಕೆಲಹೊತ್ತು ಪರದಾಡಿದರು. ಕಾರಿನಲ್ಲಿದ್ದವರು ಪವಾಡಸದೃಶರಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ಮಣಿಪಾಲ- ಪರ್ಕಳ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಬೇರೆ ಜಿಲ್ಲೆ ಅಥವಾ ರಾಜ್ಯಗಳಿಂದ ಆಗಮಿಸುವ ವಾಹನ ಚಾಲಕರು ಉಡುಪಿಯಿಂದ ಕಾರ್ಕಳಕ್ಕೆ ತೆರಳುವಾಗ ಗೊಂದಲಕ್ಕೆ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ02 ರಂದು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ತ್ರಿಶಾ ಕಾಲೇಜಿನ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಭಾಗವಹಿಸಿ ಮಾತನಾಡಿ, ಜೀವನದ ಪ್ರಮುಖ ಘಟ್ಟವಾಗಿರುವ ಪಿಯುಸಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವಾಗ ಉಂಟಾಗುವ ಗೊಂದಲ, ಆತಂಕಗಳನ್ನು ದೂರ ಮಾಡಿ ಆತ್ಮ ವಿಶ್ವಾಸ ರೂಪಿಸಿಕೊಳ್ಳುವ ಬಗ್ಗೆ ಮತ್ತು ಉತ್ತಮ ಭವಿಷ್ಯದ ಕನಸು ಕಟ್ಟಿಕೊಂಡಿರುವ ವಿದ್ಯಾರ್ಥಿಗಳು ಪಿಯುಸಿ ನಂತರ ಮುಂದೇನು ಎನ್ನುವ ಗೊಂದಲಕ್ಕೆ ತೆರೆ ಎಳೆದು ಜೀವನದಲ್ಲಿ ಯಶಸ್ವಿಯಾಗಲು […]

ಹಿರಿತೆರೆ ಕಿರುತೆರೆಯಲ್ಲಿ ಅನು ಸಿರಿಮನೆ ಖ್ಯಾತಿಯ ಮೇಘಾ ಶೆಟ್ಟಿ ಡಬಲ್ ರೈಡಿಂಗ್

ಕಿರುತೆರೆ ಧಾರಾವಾಹಿ ಜೊತೆಜೊತೆಯಲಿ ಮೂಲಕ ಪ್ರವರ್ಧಮಾನಕ್ಕೆ ಬಂದು ರಾಜ್ಯಾದ್ಯಂತ ಅನುಸಿರಿಮನೆ ಎಂದೇ ಖ್ಯಾತಿ ಪಡೆದಿರುವ ಮೇಘಾ ಶೆಟ್ಟಿಯ ಹಿರಿತೆರೆ ಪ್ರಯಾಣ ಭರಜರಿಯಾಗಿಯೆ ಶುರುವಾಗಿದೆ. ಜೊತೆಜೊತೆಯಲಿ ಧಾರಾವಾಹಿಯ ಮುಗ್ಧ ಮೇಘಾ ಈಗ ಚಂದನವನದ ಬೇಡಿಕೆಯ ನಟಿ. ಸದ್ಯ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ ನಟನಾಗಿರುವ ತ್ರಿಬಲ್ ರೈಡಿಂಗ್ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮೇಘಾ ನಟನೆಯ ದಿಲ್ ಪಸಂದ್ ಚಿತ್ರವೂ ಬಿಡುಗಡೆಯಾಗಿದ್ದು, ಈಗ ತ್ರಿಬಲ್ ರೈಡಿಂಗ್ ಚಿತ್ರ ತೆರೆ ಕಂಡಿದೆ. ಮೇಘಾ ಬಳಿ ಇನ್ನೂ ಎರಡು […]