ಮಾಹೆ ಗಾಂಧಿಯನ್ ಸೆಂಟರ್ ನಲ್ಲಿ ಕಿರುನಾಟಕ ಪ್ರದರ್ಶನ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ವಿದ್ಯಾರ್ಥಿಗಳು ಬುಧವಾರ ಪ್ರದರ್ಶಿಸಿದ ಸಾದತ್ ಹಸನ್ ಮಂಟೋ, ಹೆರಾಲ್ಡ್ ಪಿಂಟರ್ ಮತ್ತು ಸುರೇಂದ್ರ ವರ್ಮಾ ಅವರ ಮೂರು ಕಿರುನಾಟಕಗಳು ಆಧುನಿಕ ಜೀವನದ ಸಂಕೀರ್ಣತೆಯ ಬಗ್ಗೆ ಪ್ರೇಕ್ಷಕರನ್ನು ಯೋಚಿಸುವಂತೆ ಮಾಡಿತು. ಮೂರು ಕಿರುನಾಟಕಗಳಾದ ಉಪರ್ ನೀಚೆ ಔರ್ ದರ್ಮಿಯಾನ್ (ಸಾದತ್ ಹಸನ್ ಮಂಟೋ), ವಿಕ್ಟೋರಿಯಾ ಸ್ಟೇಷನ್ (ಹೆರಾಲ್ಡ್ ಪಿಂಟರ್), ನೀಂದ್ ಕ್ಯುನ್ ರಾತ್ ಭರ್ ನಹಿ ಆತಿ(ಸುರೇಂದ್ರ ವರ್ಮ)ನ್ನು ರಂಗ ನಿರ್ದೇಶಕರಾದ ಅಭಿನವ್ ಗ್ರೋವರ್ […]

ತೆಂಕಪೇಟೆ: ಕಾಶೀಮಠಾಧೀಶರಿಂದ ಭಜನಾ ಸಪ್ತಾಹ ಪೌಳಿ ರಜತ ಅಲಂಕಾರಿಕ ಮಂಟಪ ಸಮರ್ಪಣೆ

ತೆಂಕಪೇಟೆ: ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನಕ್ಕೆ ಶನಿವಾರದಂದು ಶ್ರೀ ಸಂಸ್ಥಾನ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಭೇಟಿ ನೀಡಿ, ಶ್ರೀ ಲಕ್ಷ್ಮೀ ವೆಂಕಟೇಶ ದೇವರಿಗೆ ನೂತನ ಸುವರ್ಣ ಖಚಿತ ಶ್ರೀಲಕ್ಷ್ಮೀಹಾರ ಸಮರ್ಪಣೆ ಮಾಡಿದರು. ಶ್ರೀ ದೇವರಿಗೆ ವಿಶೇಷ ಅಲಂಕಾರ, ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ಭಜನಾ ಸಪ್ತಾಹ ಪೌಳಿಯಲ್ಲಿ ನೂತನವಾಗಿ ನಿರ್ಮಿಸಿದ ರಜತ ಅಲಂಕಾರಿಕ ಮಂಟಪವನ್ನು ಪೂಜ್ಯ ಶ್ರೀಗಳ ಆರತಿ ಬೆಳಗಿಸಿ ಉದ್ಘಾಟಿಸಿದರು. ಧಾರ್ಮಿಕ ಪೂಜಾವಿಧಾನಗನ್ನು ಚೇಂಪಿ ಶ್ರೀಕಾಂತ್ ಭಟ್ ನೆರವೇರಿಸಿದರು. ದೇವಳದ […]

ಕೊಂಕಣ ರೈಲ್ವೆ ವತಿಯಿಂದ ಮಂಗಳೂರು-ಮುಂಬೈ ನಡುವೆ ಚಳಿಗಾಲದ ಸಾಪ್ತಾಹಿಕ ವಿಶೇಷ ರೈಲುಗಳ ವೇಳಾಪಟ್ಟಿ ಇಲ್ಲಿದೆ

ಮಂಗಳೂರು: ಕೊಂಕಣ ರೈಲ್ವೆಯು ಕೇಂದ್ರ ರೈಲ್ವೆಯ ಸಹಯೋಗದೊಂದಿಗೆ ಮುಂಬೈ ಮತ್ತು ಮಂಗಳೂರು ನಡುವೆ ಚಳಿಗಾಲದಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತೆರವುಗೊಳಿಸಲು ವಿಶೇಷ ರೈಲುಗಳನ್ನು ನಿರ್ವಹಿಸಲಿದೆ. ಡಿಸೆಂಬರ್ 9 ರಿಂದ ಜನವರಿ 6 ರವರೆಗೆ ಪ್ರತಿ ಶುಕ್ರವಾರ: ರೈಲು ನಂ. 01453 ಲೋಕಮಾನ್ಯ ತಿಲಕ್ (ಟರ್ಮಿನಲ್) – ಮಂಗಳೂರು ಜಂಕ್ಷನ್ ವಿಶೇಷ (ಸಾಪ್ತಾಹಿಕ), ಲೋಕಮಾನ್ಯ ತಿಲಕ್ (ಟಿ) ನಿಂದ ರಾತ್ರಿ 10.15 ಕ್ಕೆ ಹೊರಡಲಿದೆ. ರೈಲು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಡಿಸೆಂಬರ್ 10 ರಿಂದ ಜನವರಿ […]

ವಿಕಲಚೇತನರಿಗೆ ಅನುಕಂಪವಲ್ಲ, ಸ್ವಾಭಿಮಾನದಿಂದ ಬದುಕುವ ಅವಕಾಶ ನೀಡಿ: ಶರ್ಮಿಳಾ ಎಸ್

ಉಡುಪಿ: ವಿಕಲಚೇತನರ ಸಾಧನೆಗಳಿಗೆ ಸಮಾಜವು ಪ್ರೋತ್ಸಾಹ ನೀಡಬೇಕು. ಅವರನ್ನು ಅನುಕಂಪದಿಂದ ಕಾಣುವುದಕ್ಕಿಂತ ಸ್ವಾಭಿಮಾನದಿಂದ ಬದುಕುವ ಹಕ್ಕು ಮತ್ತು ಅವಕಾಶವನ್ನು ನೀಡಬೇಕು. ಅವರಿಗೆ ಅವಮಾನ ಮಾಡುವುದು, ವಂಚಿಸುವುದು ಅವರ ಸಾಧನಗಳನ್ನು ಹಾಳುಗೆಡುವುದು ಜಾಮೀನುರಹಿತ ಅಪರಾಧವಾಗಿದ್ದು, 6 ತಿಂಗಳಿಂದ 6 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದ್ದು, ವಿಕಲಚೇತನರನ್ನು ಮುಖ್ಯವಾಹಿನಿಗೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಎಸ್ ಹೇಳಿದರು. ಅವರು ಶನಿವಾರ ನಗರದ ಶ್ರೀಮತಿ ಅಮ್ಮಣ್ಣಿ […]

ಗುಜರಾತಿನ ನರ್ಮದಾ ನದಿಯ ಬಯಲಿನಲ್ಲಿದೆ ಭೂಗ್ರಹದ ಅತ್ಯಂತ ಹಳೆಯ ಬೃಹತ್ ಜೀವಿಗಳ ಪಳೆಯುಳಿಕೆಗಳು!

ಇಂದಿಗೆ ಸುಮಾರು 180 ಮಿಲಿಯನ್ ವರ್ಷಗಳ ಹಿಂದಿನ ಮಾತಿದು. ಆಗ ಭೂಗ್ರಹದ ಭೂಖಂಡಗಳು ಇಂದಿನಂತಿರದೆ ಒಂದಕ್ಕೊಂದು ಅಂಟಿಕೊಂಡಿದ್ದವು. ಈ ಒಂದೇ ಭೂಖಂಡವನ್ನು ಪಾಂಜಿಯಾ ಎಂದು ಕರೆಯಲಾಗುತ್ತದೆ. ಈ ಕಾಲವನ್ನು ಜುರಾಸಿಕ್ ಯುಗವೆಂದೂ ಕರೆಯಲಾಗುತ್ತದೆ. ಭೂ ತಟ್ಟೆಗಳ ಚಲನೆಯಿಂದಾಗಿ ಈ ಪಾಂಜಿಯಾ ಖಂಡವು ಬೇರ್ಪಟ್ಟು ಇಂದು ನಾವು ನೋಡುತ್ತಿರುವ ಸಪ್ತಖಂಡಗಳಾಗಿ ಹರಿದು ಹಂಚಿಹೋದವು. ಕ್ರಿಟೇಶಿಯಸ್ ಅವಧಿಯ ಸರಿಸುಮಾರು 145-65 ಮಿಲಿಯನ್ ವರ್ಷಗಳ ಅಂತರದಲ್ಲಿ ಈ ಎಲ್ಲಾ ಭೂಖಂಡಗಳು ನಿಧಾನವಾಗಿ ದೂರ ಸರಿದು, ಭಾರತೀಯ ಖಂಡವು ಸಮುದ್ರದಲ್ಲಿ ತೇಲುತ್ತಾ ಏಷಿಯಾ […]