ಶಾಲಾ ಮಕ್ಕಳಿಗೆ ಉಚಿತ ಅಪಘಾತ ವಿಮೆ ವಿತರಣೆ

ಉಡುಪಿ: ಕಡಿಯಾಳಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ಸಂಯೋಜನೆಯಲ್ಲಿ ಜೆಸಿಐ ಉಡುಪಿ ಸಿಟಿ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗೆ ಉಚಿತ ಅಪಘಾತ ವಿಮೆ ವಿತರಣಾ ಕಾರ್ಯಕ್ರಮ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯ ವಿ.ಜಿ. ಬೈಕಾಡಿ (ವಿಠ್ಠಲ ಗಿರಿ ರಾವ್) ನನ್ನ ನಿವೃತ್ತಿ ಸಮಯದಲ್ಲಿ ವಿಮಾ ರಕ್ಷಣೆ ಒದಗಿಸುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಯ ನಿವೃತ್ತ ಶಿಕ್ಷಕ ಲಕ್ಷ್ಮೀನಾರಾಯಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಶಾಲೆ 149 ವರ್ಷದ […]

ಕೊಡವೂರು: ಕನಕ ಜಯಂತಿ‌ ಆಚರಣೆ; ದಿವ್ಯಾಂಗ ರಕ್ಷಣಾ ಸಮಿತಿ ಅಂಗವಿಕಲರಿಗೆ ದಿನಸಿ ಕಿಟ್ ವಿತರಣೆ

ಕೊಡವೂರು: ದಿವ್ಯಾಂಗ ರಕ್ಷಣಾ ಸಮಿತಿ ವತಿಯಿಂದ ಕೊಡವೂರು ವಾರ್ಡ್ ನಲ್ಲಿ ಕನಕ ಜಯಂತಿ ಆಚರಿಸಲಾಯಿತು. ಸೇವಾ ಭಾರತಿ ಕನ್ಯಾಡಿ (ಬೆನ್ನು ಮೂಳೆ ಮುರಿತಕ್ಕೆ ಒಳಗಾದವರ ಪುನಶ್ಚೇತನ ಕೇಂದ್ರ) ಇದರ ಅಧ್ಯಕ್ಷ ವಿನಾಯಕ ರಾವ್ ಮಾತನಾಡಿ, ಕೊಡವೂರು ವಾರ್ಡ್ ಸರಕಾರದ ಅನುದಾನ ಹಾಗೂ ಸಂಘಟನೆಗಳ ಸಹಕಾರದೊಂದಿಗೆ 28,92,515 ರೂ. ಸೇವಾ ಕಾರ್ಯಗಳನ್ನು ಮಾಡಿರುವುದು ಶ್ಲಾಘನೀಯ ಎಂದರು. ವಾರ್ಡ್ ನ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಉದ್ದೇಶದೊಂದಿಗೆ ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ರಚಿಸಿ ಕೃಷಿ, ಅಂಗವಿಕಲರಿಗೆ, ನಿರುದ್ಯೋಗಿಗಳಿಗೆ ಸಹಾಯ ಮಾಡುವುದರೊಂದಿಗೆ […]

ಮಣಿಪಾಲ: ಅಕ್ರಮವಾಗಿ ಮನೆಯೊಳಗೆ ಪ್ರವೇಶಿಸಿ ವ್ಯಕ್ತಿಯ ಮೇಲೆ ಹಲ್ಲೆ; ದೂರು ದಾಖಲು

ಮಣಿಪಾಲ: ಮನೆಯೊಳಗೆ ಪ್ರವೇಶಿಸಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಹೆರ್ಗ ಗ್ರಾಮದ ಶೆಟ್ಟಿಬೆಟ್ಟು ಮಾರುತಿ ನಗರದಲ್ಲಿ ನಡೆದಿದೆ. ಹೆರ್ಗ ಗ್ರಾಮದ ಶೆಟ್ಟಿಬೆಟ್ಟು ಮಾರುತಿ ನಗರದ ನಿವಾಸಿ ಸಂದೀಪ್ ಹಲ್ಲೆಗೊಳಗಾದ ವ್ಯಕ್ತಿ.‌ ಈ ಹಿಂದೆ ಸಂದೀಪ್ ಅವರು ಈಶ್ವರನಗರದ ಹರೀಶ್ ಪೂಜಾರಿ ಎಂಬವರ ಜೊತೆಗೂಡಿ ಉಡುಪಿಯಲ್ಲಿ ಬಟ್ಟೆ ಅಂಗಡಿ ವ್ಯವಹಾರ ನಡೆಸುತ್ತಿದ್ದರು. ಇದೇ ವಿಚಾರದಲ್ಲಿ‌ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ನ.24ರಂದು ಬೆಳಿಗ್ಗೆ ಹರೀಶ್ ಪೂಜಾರಿ, ಸಂದೀಪ್ ಮನೆಯ ಅಂಗಳಕ್ಕೆ ಬಂದು ಮನೆಯ ಕಾಲಿಂಗ್ ಬೆಲ್ ಹಾಕಿದ್ದಾನೆ. […]

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ‌ ಹುದ್ದೆ: ಅರ್ಜಿ‌ ಆಹ್ವಾನ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಡೆಪ್ಯೂಟಿ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆ: ಡೆಪ್ಯೂಟಿ ಮ್ಯಾನೇಜರ್‌ ಹುದ್ದೆಗಳ ಸಂಖ್ಯೆ: 90 ಸ್ಥಳ: ದೇಶದೆಲ್ಲೆಡೆ ವಿದ್ಯಾರ್ಹತೆ: ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಮುಗಿಸಿರಬೇಕು. ಡೆಪ್ಯೂಟಿ ಮ್ಯಾನೇಜರ್ (ಎಫ್‌ ಅಂಡ್ ಎ) ಹುದ್ದೆಗೆ ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಅಥವಾ ಸಿಎ, ಎಂಬಿಎ ಮುಗಿಸಿರಬೇಕು. ವಯೋಮಿತಿ; ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ […]

ಗರೀಬ್‌ ಕಲ್ಯಾಣ್‌ ಅನ್ನ ಯೋಜನೆ ಮಾರ್ಚ್ ವರೆಗೆ ವಿಸ್ತರಣೆ: ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಉಚಿತ ಧಾನ್ಯ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯನ್ನು ಕೇಂದ್ರ ಸರ್ಕಾರ 2022ರ ಮಾರ್ಚ್ ವರೆಗೆ ವಿಸ್ತರಣೆ ಮಾಡಿದೆ. ಈ ಯೋಜನೆ ಅಡಿಯಲ್ಲಿ ಪ್ರತೀ ವ್ಯಕ್ತಿಗೆ ಪ್ರತೀ ತಿಂಗಳು ಐದು ಕೆ.ಜಿ. ಆಹಾರ ಧಾನ್ಯ ಉಚಿತವಾಗಿ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ (ಎನ್‌ಎಫ್‌ಎಸ್‌ಎ) ವ್ಯಾಪ್ತಿಯಲ್ಲಿ ಬರುವ 80 ಕೋಟಿಗೂ ಹೆಚ್ಚು ಜನರಿಗೆ ಯೋಜನೆಯಿಂದ ಅನುಕೂಲ ಆಗಲಿದೆ. ಕೋವಿಡ್‌ […]