ಡಿಪ್ಲೋಮಾ ಪ್ರವೇಶಾತಿ: ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 21 ರ ವರೆಗೆ ವಿಸ್ತರಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ. 35 ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್ ಮತ್ತು ಕ್ಲೌಡ್ ಕಂಪ್ಯೂಟಿoಗ್ ಅಂಡ್ ಬಿಗ್ ಡೇಟಾ ಎಂಬ ನೂತನ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಸೂಕ್ತ ದಾಖಲೆಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ […]

ವಿಶೇಷಚೇತನರ ಬದುಕಿಗೆ ಪೂರಕವಾಗುವ ವ್ಯವಸ್ಥೆ ಕಲ್ಪಿಸಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ವಿಶೇಷಚೇತನರು ಅಂಗವೈಕಲ್ಯತೆಯನ್ನು ಮರೆತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡುತ್ತಿದ್ದು, ಅವರ ಬದುಕಿಗೆ ಪೂರಕವಾಗುವ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಇಡೀ ಸಮಾಜ ಅವರ ಜೊತೆಗೂಡಬೇಕು ಎಂದು ಜಿಲ್ಲಾಧಿಕಾರಿಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ ಕ್ರಾಸ್‌ಸಂಸ್ಥೆ ಉಡುಪಿ ಜಿಲ್ಲೆ ಮತ್ತು ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ […]

ಎಂಪಿಎಂ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಎಂ.ಪಿ.ಎಂ ಕಾಲೇಜಿನಲ್ಲಿ ಮೇ.16 ರಂದು ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎಂ. ಪಿ. ಎಂ. ನ ಹಳೆ ವಿದ್ಯಾರ್ಥಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸುರೇಶ್ ಅತ್ತೂರ್ ಇವರು ಮಾತನಾಡಿ , ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಒಂದು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನದೊಂದಿಗೆ ಶೇ 100 ಫಲಿತಾಂಶ.

ಕುಂದಾಪುರ: ಶಿಕ್ಷಣ ಜೀವನದ ಸಂಪತ್ತು ಎನ್ನುವುದನ್ನು ಅರಿತ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿ, ಸದೃಢವಾದ, ಸುಸಂಸ್ಕೃತವಾದ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಬೇಕು ಎನ್ನುವ ಸದುದ್ದೇಶದಿಂದ ಅಭೂತಪೂರ್ವ ಜ್ಞಾನವನ್ನು ಧಾರೆಯೆರೆದು ಸೃಜನ ಶೀಲ ಶಿಕ್ಷಣದೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿದ್ಯಾರ್ಥಿ ಪ್ರತಿಭೆಗಳನ್ನು ಬೆಳೆಸುತ್ತಿರುವ ಅತ್ಯಂತ ಉನ್ನತವಾದ ಶಿಕ್ಷಣ ಸಂಸ್ಥೆ. ಸಂಸ್ಥೆಯಲ್ಲಿ ವಿಜ್ಞಾನ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ಶಿಕ್ಷಣ ಕ್ರಮ ನೀಡಲಾಗುತ್ತಿದ್ದು, ವಿಜ್ಞಾನ ವಿಭಾಗದಲ್ಲಿ PCMB, PCMC ಮತ್ತು PCMS, ವಾಣಿಜ್ಯ […]

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ: ಚೇತನಾ ನವೋದಯ ಸ್ವಸಹಾಯ ಗುಂಪುಗಳ ಮಾಹಿತಿ ಕಾರ್ಯಾಗಾರ

ಉಡುಪಿ: ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಹೆಸರುವಾಸಿಯಾಗಿರುವ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಚೇತನಾ ಸ್ವಸಹಾಯ ಗುಂಪುಗಳ ಸದಸ್ಯರ ಮಾಹಿತಿ ವಿನಿಮಯ ಕಾರ್ಯಾಗಾರವು ಸಂಘದ ಜಗನ್ನಾಥ ಸಭಾಭವನದಲ್ಲಿ ಜರಗಿತು. ಸ್ವಸಹಾಯ ಗುಂಪುಗಳ ಬಲವರ್ಧನೆಗಾಗಿ ಹಮ್ಮಿಕೊಂಡ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 100 ಸ್ವಸಹಾಯ ಗುಂಪುಗಳ ಸದಸ್ಯರು ಭಾಗವಹಿಸಿ ಮಾಹಿತಿ ಪಡೆದರು. ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕರಾದ ಹರಿನಾಥ್‍ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನವೋದಯ ಸ್ವಸಹಾಯ ಗುಂಪುಗಳ ಕೋ-ಆರ್ಡಿನೇಟರ್‍ಗಳಾದ ಕೃಷ್ಣ ನಾಯ್ಕ್, ಸುಮಿತ್ರಾ, ಗೀತಾ […]