ವಿಹಿಂಪ ಮೆರವಣಿಗೆ ಮೇಲೆ ಕಲ್ಲು ತೂರಾಟ: ಹರ್ಯಾಣದಲ್ಲಿ ಹಿಂಸಾಚಾರ; ನಿಷೇಧಾಜ್ಞೆ ಜಾರಿ

ಚಂಡಿಗಢ: ಹರ್ಯಾಣದ ನುಹ್ ಜಿಲ್ಲೆಯಲ್ಲಿ ಜನಸಮೂಹವೊಂದು ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯನ್ನು ತಡೆಯಲು, ಕಲ್ಲು ತೂರಾಟ ಮತ್ತು ಕಾರುಗಳಿಗೆ ಬೆಂಕಿ ಹಚ್ಚಿದ ಕಾರಣ ಇಬ್ಬರು ಹೋಮ್ ಗಾರ್ಡ್‌ಗಳು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಪೊಲೀಸರು ಸೇರಿದಂತೆ ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡು ಹಾರಿಸಲಾಯಿತು. ಜನಸಮೂಹ ವಿಶ್ವ ಹಿಂದೂ ಪರಿಷತ್ ಮೆರವಣಿಗೆಯನ್ನು ತಡೆಯಲು ಪ್ರಯತ್ನಿಸಿದಾಗ ಗಲಭೆ ಭುಗಿಲೆದ್ದಿತು, ಕಲ್ಲು ತೂರಾಟ ಮತ್ತು ಕಾರುಗಳಿಗೆ ಬೆಂಕಿ ಹಚ್ಚಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. VIDEO | Several […]

ಕಿನ್ನಿಮೂಲ್ಕಿ ಬ್ರಹ್ಮ ಬೈದರ್ಕಳ ಬಡಾವಣೆ ನಿವಾಸಿಗಳ ಸಂಘದ ಮಹಾಸಭೆ

ಉಡುಪಿ: ಬ್ರಹ್ಮ ಬೈದರ್ಕಳ ನಗರ ಬಡಾವಣೆ ನಿವಾಸಿಗಳ ಸಂಘದ ಮಹಾಸಭೆಯು ಜುಲೈ 23 ರಂದು ಕಿನ್ನಿಮುಲ್ಕಿ ಶ್ರೀ ವೀರಭದ್ರ ಕಲಾ ಭವನದಲ್ಲಿ ಜರಗಿತು. ನಗರಸಭೆ ಸದಸ್ಯೆ ಅಮೃತ ಕೃಷ್ಣಮೂರ್ತಿ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಬಡಾವಣೆಯ ಅಭಿವೃದ್ಧಿಗಾಗಿ ಸರಕಾರದಿಂದ ಅನುದಾನ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದರು. ಬಡಾವಣೆಯ ನಿವಾಸಿಗಳಲ್ಲಿ ಹತ್ತನೇ ತರಗತಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅನಾರೋಗ್ಯದಿಂದ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಸಂಘದ ವತಿಯಿಂದ ಸಹಾಯಧನ ವಿತರಿಸಲಾಯಿತು. ಅ ಅಧ್ಯಕ್ಷ ವಿಜಯ್ ಕುಮಾರ್ ಸ್ವಾಗತಿಸಿದರು. […]

ಡಾ. ದೇವದಾಸ್ ಕಾಮತ್ ಅವರ ಅಭಿನಂದನಾ ಕಾರ್ಯಕ್ರಮ: ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಹಿರಿಯಡಕ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜು. 31 ರಂದು ನಡೆದ IMA-KSB DOCTORS DAY AWARD – 2023 ಪ್ರಶಸ್ತಿ ಪುರಸ್ಕೃತ ಡಾ. ದೇವದಾಸ್ ಕಾಮತ್ ಅವರ ಅಭಿನಂದನಾ ಸಮಾರಂಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಬಿ.ಎಲ್ ವಿಶ್ವಾಸ್ ಭಟ್, ಅಮೋಘ (ರಿ.) ಹಿರಿಯಡಕದ ನಿರ್ದೇಶಕಿ ಪೂರ್ಣಿಮಾ ಸುರೇಶ್, ಶಾಲಾ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕೇಕ್​ ಕತ್ತರಿಸಿ ಸಂಭ್ರಮಿಸಿದ ತಾರೆ: 31ನೇ ವಸಂತಕ್ಕೆ ಕಾಲಿರಿಸಿದ ಕಿಯಾರಾ ಅಡ್ವಾಣಿ

ಬಾಲಿವುಡ್​ ಬಹುಬೇಡಿಕೆಯ ನಟಿ ಕಿಯಾರಾ ಅಡ್ವಾಣಿ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಸೇರಿ ಕೇಕ್​ ಕತ್ತರಿಸಿದ್ದಾರೆ. ಕಿಯಾರಾ ಅವರ ಸ್ನೇಹಿತರೊಬ್ಬರು ಬರ್ತ್​ಡೇ ಆಚರಣೆಯ ಫೋಟೋಗಳನ್ನು ಇನ್​ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಪತಿ ಸಿದ್ದಾರ್ಥ್​ ಮಲ್ಹೋತ್ರಾ ಜೊತೆಯಲ್ಲಿ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಸೋಮವಾರ ಬಾಲಿವುಡ್​ ನಟಿ ಕಿಯಾರಾ ಅಡ್ವಾಣಿ 31ನೇ ವರ್ಷದ ಹುಟ್ಟುಹಬ್ಬ. ಫೋಟೋದಲ್ಲಿ ಕಿಯಾರಾ ಅಡ್ವಾಣಿ ಕೇಕ್​ ಕತ್ತರಿಸಲು ಕುಳಿತಿರುವುದನ್ನು ಕಾಣಬಹುದು. ತೆರೆದ ಕೇಶವಿನ್ಯಾಸ ಮತ್ತು ಮೇಕಪ್​ ಇಲ್ಲದ ನೋಟದಲ್ಲೂ ಸುಂದರವಾಗಿ ಕಾಣುತ್ತಿದ್ದಾರೆ. ಅವರು ಕುಳಿತಿರುವ ಡೈನಿಂಗ್​ ಟೇಬಲ್​ ಹಿಂಬದಿಯ […]

‘ಘೂಮರ್’ ಮೋಷನ್ ಪೋಸ್ಟರ್​ ರಿಲೀಸ್, ಬಿಡುಗಡೆಗೂ ಮುಹೂರ್ತ ಫಿಕ್ಸ್​

ಬಾಲಿವುಡ್​ ನಟ ಅಭಿಷೇಕ್​ ಬಚ್ಚನ್​ ಅವರ ಮುಂಬರುವ ಬಹುನಿರೀಕ್ಷಿತ ‘ಘೂಮರ್’ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸೋಮವಾರ ಚಿತ್ರದ ಬಿಡುಗಡೆ ದಿನಾಂಕದ ಜೊತೆಗೆ ಅಭಿಷೇಕ್​ ಬಚ್ಚನ್​ ಮತ್ತು ನಟಿ ಸಯಾಮಿ ಖೇರ್​ ಅವರ ಫಸ್ಟ್​ ಲುಕ್​ ಮೋಷನ್​ ಪೋಸ್ಟರ್​ ರಿಲೀಸ್​ ಆಗಿದೆ. ಟ್ರೇಲರ್​ಗೂ ಮುಹೂರ್ತ ಫಿಕ್ಸ್​ ಆಗಿದೆ. ‘ಘೂಮರ್’ ಸಿನಿಮಾವನ್ನು ಆರ್​ ಬಾಲ್ಕಿ ನಿರ್ದೇಶಿಸಿದ್ದಾರೆ.ಈ ಕ್ರೀಡಾಧಾರಿತ ಚಿತ್ರದಲ್ಲಿ ಜೂನಿಯರ್​ ಬಚ್ಚನ್​ ಕೋಚ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಭಿಷೇಕ್​ ಬಚ್ಚನ್​ ಮತ್ತು ಸಯಾಮಿ ಖೇರ್​ ಅವರ ಫಸ್ಟ್​ ಲುಕ್​ ಮೋಷನ್​ ಪೋಸ್ಟರ್​ […]