2 ಕೆಜಿ ಟೊಮೆಟೊ ಉಚಿತವಾಗಿ ಪಡೆಯಲು ಸ್ಮಾರ್ಟ್‌ಫೋನ್ ಖರೀದಿಸಿ

ಅಶೋಕನಗರ (ಮಧ್ಯಪ್ರದೇಶ): ಪ್ರಸ್ತುತ ಒಂದು ಕೆಜಿ ಟೊಮೆಟೊ 150ರಿಂದ 200ರವರೆಗೆ ಮಾರಾಟವಾಗುತ್ತಿದೆ. ಇದರಿಂದ ಗ್ರಾಹಕರು ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಆದರೆ ಈಗ ಮಾರುಕಟ್ಟೆಗೆ ಟೊಮೆಟೊ ಆವಕ ಇಳಿಕೆ ಕಂಡಿದೆ. ಆಹಾರ ದೈತ್ಯ ಮೆಕ್‌ಡೊನಾಲ್ಡ್ ತನ್ನ ಮೆನುವಿನಿಂದ ಟೊಮೆಟೊ ಅನ್ನು ಕೈಬಿಟ್ಟಿದೆ ಎಂಬುದರ ಕುರಿತು ವರದಿಯಾಗಿದೆ.ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಮುಖಿಯಾಗಿದೆ. ಟೊಮೆಟೊ ಬೆಲೆಯಂತೂ ತುಂಬಾ ಏರಿಕೆಯಾಗಿದೆ.ಮಧ್ಯಪ್ರದೇಶದ ಅಶೋಕನಗರದ ಮೊಬೈಲ್ ಅಂಗಡಿಯವರೊಬ್ಬರು ಸ್ಮಾರ್ಟ್‌ಫೋನ್ ಖರೀದಿಸಿದರೆ, ಎರಡು ಕೆಜಿ ಟೊಮೆಟೊವನ್ನು ಉಚಿತವಾಗಿ ನೀಡುತ್ತಿದ್ದಾರೆ. ಹಬ್ಬ ಹರಿದಿನಗಳಲ್ಲಿ ಗ್ರಾಹಕರನ್ನು ಸೆಳೆಯಲು ವಿಶೇಷ ರಿಯಾಯಿತಿ […]

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಂದ ದೇವರ ಕನಸು’ ಚಿತ್ರದ ಟ್ರೇಲರ್​ ಬಿಡುಗಡೆ

ಇದೀಗ ಸುರೇಶ್ ಲಕ್ಕೂರ್ ನಿರ್ದೇಶನದ ‘ದೇವರ ಕನಸು’ ಚಿತ್ರ, ಬಿಡುಗಡೆಗೂ ಮುನ್ನವೇ ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ‌. ಹೀಗೆ ಹಲವು ವಿಶೇಷತೆಯಿಂದ ಕೂಡಿರುವ ‘ದೇವರ ಕನಸು’ ಚಿತ್ರಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಸಾಥ್​ ಸಿಕ್ಕಿದೆ. ಕನ್ನಡ ಚಿತ್ರರಂಗದಲ್ಲಿ ಕಮರ್ಷಿಯಲ್ ಚಿತ್ರಗಳ‌ ಮಧ್ಯೆ ಮಕ್ಕಳ ಸಿನಿಮಾಗಳು ಸಿನಿ ಪ್ರಿಯರನ್ನು ರಂಜಿಸುತ್ತಿವೆ.ಸುರೇಶ್ ಲಕ್ಕೂರ್ ನಿರ್ದೇಶನದ ‘ದೇವರ ಕನಸು’ ಚಿತ್ರದ ಟ್ರೇಲರ್​ ಅನ್ನು ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಬಿಡುಗಡೆಗೊಳಿಸಿದರು ಈ ಚಿತ್ರದ ಟ್ರೇಲರ್​ […]

ರೈತರ ಮೊಗದಲ್ಲಿ ಸಂತಸ : ಕೆಆರ್​ಎಸ್ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ

ಮಂಡ್ಯ: 2023ನೇ ಸಾಲಿನಲ್ಲಿ ಇದೇ ಅಧಿಕ ಪ್ರಮಾಣದ ಒಳ ಹರಿವು ಆಗಿದ್ದು. ಒಂದೇ ದಿನ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಡ್ಯಾಂನಲ್ಲಿ ನೀರಿನ ಮಟ್ಟ ಹೆಚ್ಚಳವಾಗಿರುವುದರಿಂದ ರಾಜ್ಯ ಮತ್ತು ತಮಿಳುನಾಡಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿಯಾಗಿದ್ದು, ಈಗ ಅದು 82 ಅಡಿಗೆ ತಲುಪಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 11.695 ಟಿಎಂಸಿ ನೀರು ಶೇಖರಣೆಯಾಗಿದೆಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾದ ಹಿನ್ನೆಲೆ […]

ಗಾಯಾಳುಗಳ ಸಮಸ್ಯೆಯಿಂದ ಹೊಸಬರಿಗೆ ಅವಕಾಶ ಮೊದಲ ಟೆಸ್ಟ್​ಗೆ ವೆಸ್ಟ್​ ಇಂಡೀಸ್​ನ ತಂಡ ಪ್ರಕಟ

ಡೊಮಿನಿಕಾ: ಈ ಟೆಸ್ಟ್​ ಪಂದ್ಯದಲ್ಲಿ ಕಿರ್ಕ್ ಮೆಕೆಂಜಿ ಅವರು ಪದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದರೊಂದಿಗೆ ರಹಕೀಮ್ ಕಾರ್ನ್‌ವಾಲ್ ಮತ್ತು ಜೋಮೆಲ್ ವಾರಿಕಾನ್ ಅವರನ್ನು ಭಾರತದ ವಿರುದ್ಧ ಸ್ಪಿನ್ ಆಸ್ತ್ರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಕೊನೆಯ ಟೆಸ್ಟ್​ ಪ್ರವಾಸಕ್ಕೆ ಆಯ್ಕೆಯಾಗಿದ್ದ ಅಲಿಕ್ ಅಥಾನಾಜ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.ಎಡಗೈ ಬ್ಯಾಟ್ಸ್‌ಮನ್ ಕಿರ್ಕ್ ಮೆಕೆಂಜಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್‌ನ 13 ಆಟಗಾರರ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ. ಜುಲೈ 12 ರಿಂದ ಡೊಮಿನಿಕಾದಲ್ಲಿ ಮೊದಲ ಟೆಸ್ಟ್‌ನಲ್ಲಿ ನಡೆಯಲಿದೆ.ಭಾರತ ತಂಡದ ವಿರುದ್ಧದ […]

53 ವರ್ಷಗಳ ನಂತರ ನಟ ನಾಸಿರುದ್ದೀನ್ ಶಾ ಮಗಳ ಜನನ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ

ಪರಿಚಿತ ಅಧಿಕಾರಿಯ ಮೂಲಕ ಮುಂಬೈನಿಂದ ಮಹಾನಗರ ಪಾಲಿಕೆಗೆ ಅರ್ಜಿ ಕಳುಹಿಸಲಾಗಿದೆ. ಆದರೆ, ಈ ಅರ್ಜಿ ಕುರಿತು ಗೌಪ್ಯವಾಗಿ ತನಿಖೆಗೆ ಸಿದ್ಧತೆ ನಡೆದಿದೆ. ಆದರೆ ಇದು ಸದ್ಯ ಸೋಷಿಯಲ್​ ಮೀಡಿಯದಲ್ಲೂ ಸಖತ್​ ಸುದ್ದಿಯಾಗಿದೆ.ಖ್ಯಾತ ಚಲನಚಿತ್ರ ನಟ ನಾಸಿರುದ್ದೀನ್ ಶಾ ತಮ್ಮ ಮಗಳು ಹಿಬಾ ಶಾಗೆ ಜನನ ಪ್ರಮಾಣ ಪತ್ರ ಮಾಡಿಸಲು ಅರ್ಜಿ ಸಲ್ಲಿಸಿದ್ದಾರೆ. ಆದರೆ 53 ವರ್ಷಗಳ ನಂತರ ಈ ಅರ್ಜಿ ಸಲ್ಲಿಸಿರುವುದು ಚರ್ಚೆಗೆ ಕಾರಣವಾಗಿದೆ.ಬಾಲಿವುಡ್​ ನಟ ನಾಸಿರುದ್ದೀನ್ ಶಾ 53 ವರ್ಷಗಳ ನಂತರ ತಮ್ಮ ಮಗಳ ಜನನ […]