ವರುಣನ ರುದ್ರಾವತಾರಕ್ಕೆ ಅವಳಿ ಜಿಲ್ಲೆ ತತ್ತರ: ಉಕ್ಕೇರಿರುವ ನದಿಗಳು; ಧರೆಗುರುಳುವ ಮರಗಳು; ಸಂಚಾರ ಅಸ್ತವ್ಯಸ್ಥ

ಮಂಗಳೂರು/ಉಡುಪಿ: ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಲೇಡಿ ಹಿಲ್ ಸರ್ಕಲ್ ಬಳಿ ಹಳೆಯದಾದ ಬೃಹತ್ ಆಲದ ಮರವೊಂದು ಉರುಳಿಬಿದ್ದಿದ್ದು, ಜನನಿಬಿಡ ಕೊಟ್ಟಾರ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಮರವನ್ನು ತೆರವುಗೊಳಿಸುವ ಕರ್ಯ ನಡೆದಿದೆ. ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದ್ದು, ಸದ್ಯಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರು ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಕುಮಾರಧಾರಾ ನದಿಯ ದಡದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಪ್ರವಾಹದಿಂದಾಗಿ ಮುಳುಗಿದೆ. ದೇವಸ್ಥಾನ ಭೇಟಿಯಲ್ಲಿರುವ ಭಕ್ತರು ನದಿಯ ಬಳಿ ಹೋಗದಂತೆ ಆಡಳಿತ ಮಂಡಳಿ ತಿಳಿಸಿದೆ. […]

ಸಂಘ ಸಂಸ್ಥೆಗಳು ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾಯಕದಲ್ಲಿ ತೊಡಗಬೇಕು: ಜಗದೀಶ್ ಎಸ್ ಹೆಗ್ಡೆ

ಮಲಾಡ್: ಸಾಂಸ್ಕೃತಿಕ ಸಂಸ್ಕಾರ ಸಮೃದ್ಧ ಜೀವನ ಕಲೆಯನ್ನು ಪೌರಾಣಿಕ ನೀತಿ ಪಾಠದ ಮೂಲಕ ಕಲಿಸುವ ಕಲೆ ಯಕ್ಷಗಾನ . ಕರಾವಳಿ ಕರ್ನಾಟಕದ ಸಮೃದ್ಧ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹಾನಗರದಲ್ಲಿ ಯಕ್ಷಗಾನ ಕಲೆಯನ್ನು ಸಮೃದ್ಧಗೊಳಿಸುವ ಕಾಯಕ ಸಂಘ ಸಂಸ್ಥೆಗಳಿಂದ ನಡೆಯಬೇಕು ಎಂದು ಮಲಾಡ್ ಕನ್ನಡ ಸಂಘದ ಅಧ್ಯಕ್ಷ ಅಡ್ವೋಕೇಟ್ ಜಗದೀಶ್ ಎಸ್ ಹೆಗ್ಡೆ ಹೇಳಿದರು. ಮಲಾಡ್ ಪಶ್ಚಿಮದ ಲಿಂಕ್ ರೋಡ್ ಎವರ್ ಶೈನ್ ನಗರದ ಹೋಟೆಲ್ ಸಾಯಿ ಪ್ಯಾಲೇಸ್ ಗ್ರಾಂಡ್ ನಲ್ಲಿ ಮಲಾಡ್ ಕನ್ನಡ ಸಂಘ ಮತ್ತು […]

ಉಡುಪಿ ಜಿಲ್ಲಾ ಜೀವಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಉಡುಪಿ: ಜಿಲ್ಲಾ ಜೀವಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ.ಪೂ. ಕಾಲೇಜುಗಳ ಜೀವಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರ ಜು 21 ರಂದು ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ನಾಗಬನ ಕ್ಯಾಂಪಸ್ ನಲ್ಲಿ ನಡೆಯಿತು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಾರುತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಂಬರುವ ವಿವಿಧ ರೀತಿಯ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸುವಲ್ಲಿ ಉಪನ್ಯಾಸಕರ ಪಾತ್ರದ ಮಹತ್ವವನ್ನು ತಿಳಿಸಿದರು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ […]

ಅನ್ನಭಾಗ್ಯ ಯೋಜನೆ: 24 ಜಿಲ್ಲೆಗಳಲ್ಲಿ 78 ಲಕ್ಷ ಫಲಾನುಭವಿಗಳು; ಒಟ್ಟು 456 ಕೋಟಿ ರೂ. ಜಮಾ

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಎರಡನೇ ಗ್ಯಾರೆಂಟಿಯಾದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ ಬದಲಿಗೆ ನಗದು ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಈಗಾಗಲೆ ಚಾಲನೆ ದೊರೆತಿದೆ. ಜು.10 ರಂದು ಕಾರ್ಯಕ್ರಮಕ್ಕೆ ಚಾಲನೆ ದೊರೆತ ನಂತರ ಇದುವರೆಗೆ ರಾಜ್ಯ ಸರ್ಕಾರ 24 ಜಿಲ್ಲೆಯ 78.4 ಲಕ್ಷ ಫಲಾನುಭವಿಗಳಿಗೆ 456.73 ಕೋಟಿ ರೂ. ಜಮಾ ಮಾಡಿದೆ. ಇನ್ನುಳಿದ ಏಳು ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ ನೇರ ಲಾಭ ವರ್ಗಾವಣೆ (DBT) ಪ್ರಕ್ರಿಯೆಯಲ್ಲಿದೆ. ಆಹಾರ ಮತ್ತು ನಾಗರಿಕ […]

ಕಡಬ: ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಕಡಬ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಿಭಜಿತ ದ.ಕ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೂ ಸೋಮವಾರದಂದು ರಜೆ ಘೋಷಣೆ ಮಾಡಲಾಗಿದೆ. ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ್ ಅವರು ರಜೆ ಘೋಷಣೆ ಮಾಡಿದ್ದಾರೆ.