ದಿನೇಶ್ ಕಾರ್ತಿಕ್ ಅವರಿಂದ ನಟರಾಜನ್ ನಿರ್ಮಿಸಿದ ಕ್ರಿಕೆಟ್ ಮೈದಾನ ಲೋಕಾರ್ಪಣೆ
ಸೇಲಂ (ತಮಿಳುನಾಡು): ಭಾರತ ತಂಡದಲ್ಲಿ ರ್ಯಾಕರ್ ಸ್ಪೆಷಲಿಸ್ಟ್ ಆಗಿರುವ ಮತ್ತು ಟಿ20 ಮಾದರಿಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರ ಟಿ ನಟರಾಜನ್ ಅವರ ಕನಸು ನಿನ್ನೆ ಸಾಕಾರಗೊಂಡಿದೆ. ತಮ್ಮಂತೆ ಊರಿನ ಮಕ್ಕಳು ದೇಶಕ್ಕಾಗಿ ಆಡಬೇಕು ಎಂಬ ಉದ್ದೇಶದಿಂದ ಸ್ವಂತ ಖರ್ಚಿನಿಂದ ನಟರಾಜನ್ ತಾವೇ ದುಡಿದು ಕ್ರಿಕೆಟ್ ಕ್ರೀಡಾಂಗಣವನ್ನು ಮಾಡಿದ್ದರು. ನಿನ್ನೆ ಈ ಮೈದಾನ ಲೋಕಾರ್ಪಣೆಗೊಂಡಿದ್ದು, ಯುವ ಪ್ರತಿಭೆಗಳ ಅಭ್ಯಾಸಕ್ಕೆ ಅವಕಾಶ ಹೆಚ್ಚಿದಂತಾಗಿದೆ. ತಮಿಳುನಾಡಿನ ಕ್ರಿಕೆಟಿಗ ಟಿ ನಟರಾಜನ್ ಅವರು ಸ್ವಂತ ಖರ್ಚಿನಿಂದ ತಾವೇ ದುಡಿದು ನಿರ್ಮಿಸಿದ […]
ಇದೇ 27ಕ್ಕೆ ವೇಳಾಪಟ್ಟಿ ಪ್ರಕಟವಾಗಲಿದ್ದು, ವಿಶ್ವಕಪ್ಗೆ ಇನ್ನು ಮೂರೇ ತಿಂಗಳು.
ಐಸಿಸಿ ಇದೇ 27 ರಂದು ಮುಂಬೈನಲ್ಲಿ ಹೋಟೆಲ್ವೊಂದರಲ್ಲಿ ಮಾಧ್ಯಮಗೋಷ್ಟಿ ಕರೆದಿದ್ದು, ಅಂದೇ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಹೆಚ್ಚಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ವೇಳೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ -BCCI) ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ-ICC)ಗೆ ಕರಡು ವೇಳಾ ಪಟ್ಟಿಯನ್ನು ಸಲ್ಲಿಸಿತ್ತು. ಐಸಿಸಿ ಸ್ಪರ್ಧಿಸುವ ರಾಷ್ಟ್ರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ತಿಳಿಸಿ ಆಯಾ ಕ್ರಿಕೆಟ್ ಮಂಡಳಿಗೆ ಕಳುಹಿಸಿಕೊಟ್ಟಿದೆ ಎಂದು ವರದಿಗಳಾಗಿವೆ. ವಿಶ್ವಕಪ್ ಸನಿಹವಾಗುತ್ತಿದ್ದು, ಇದೇ 27 ರಂದು ಐಸಿಸಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. […]
ಮಂಗಳೂರು ಪಿಲಿಕುಳ ಸಂತಾನೋತ್ಪತ್ತಿಯಲ್ಲಿ ದೇಶದಲ್ಲಿಯೇ ಟಾಪ್ 1 ಮೃಗಾಲಯ
ಮಂಗಳೂರು (ದಕ್ಷಿಣ ಕನ್ನಡ): ದೇಶದ ಅತೀ ದೊಡ್ಡ 17 ಮೃಗಾಲಯಗಳ ಪೈಕಿ ಒಂದಾಗಿರುವ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ಅದರಲ್ಲೂ ದೇಶದಲ್ಲಿ ಅಪರೂಪದ ಹುಲಿ, ಕಾಡು, ಶ್ವಾನ, ಕಾಳಿಂಗ, ರಿಯಾ ಜಾತಿಯ ಹಕ್ಕಿಯ ಸಂತಾನಾಭಿವೃದ್ಧಿಯಲ್ಲಿ ಪಿಲಿಕುಳ ಮೃಗಾಲಯ ಹೆಚ್ಚು ಪ್ರಸಿದ್ಧಿ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ರಾಜ್ಯ ಸರಕಾರದ […]
ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಜೂ. 27ರಿಂದ ಆರಂಭ: ವೇಳಾಪಟ್ಟಿ ಪ್ರಕಟ
ಹುಬ್ಬಳ್ಳಿ : ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ವಂದೇ ಭಾರತ್ ಬೆಂಗಳೂರು – ಧಾರವಾಡ ಮಧ್ಯೆಯ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದು, ಜೂನ್ 27 ರಿಂದ ಅಧಿಕೃತ ಓಡಾಟ ಆರಂಭವಾಗಲಿದೆ. ವಂದೇ ಭಾರತ್ ರೈಲು ಜೂ. 27 ರಿಂದ ಕೆಎಸ್ಆರ್ ಬೆಂಗಳೂರು – ಧಾರವಾಡ ಮಧ್ಯೆ ಸಂಚಾರ ಪ್ರಾರಂಭಿಸಲಿದೆ. ಧಾರವಾಡ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ವರ್ಚುಯಲ್ ಆಗಿ ರೈಲಿಗೆ ಹಸಿರು […]
ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಆಮ್ಸ್ಟರ್ಡ್ಯಾಮ್ನಲ್ಲಿ ಇಂಡಿಯನ್ ರೆಸ್ಟೋರೆಂಟ್
ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ನೆದರ್ಲ್ಯಾಂಡ್ನ ರಾಜಧಾನಿ ಆಮ್ಸ್ಟರ್ಡ್ಯಾಮ್ನಲ್ಲಿ ರೆಸ್ಟೋರೆಂಟ್ ಆರಂಭಿಸಿದ್ದಾರೆ. ಮಾಜಿ, ಹಾಲಿ ಆಟಗಾರರು ಕ್ರಿಕೆಟ್ ಆಟವಲ್ಲದೇ, ಉದ್ಯಮದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ಅದಕ್ಕೆ ರೈನಾ ಇಂಡಿಯನ್ ರೆಸ್ಟೋರೆಂಟ್ ಎಂದು ಹೆಸರಿಟ್ಟಿದ್ದಾರೆ. ಸ್ವತಃ ಆಹಾರ ಪ್ರೇಮಿಯೂ ಆಗಿರುವ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೊಸ ಇನಿಂಗ್ಸ್ ಆರಂಭಿಸಿದ್ದು, ನೆದರ್ಲ್ಯಾಂಡ್ನ ಆಮ್ಸ್ಟರ್ಡ್ಯಾಮ್ನಲ್ಲಿ ತಮ್ಮದೇ ಹೆಸರಿನಲ್ಲಿ ರೆಸ್ಟೋರೆಂಟ್ ಶುರು ಮಾಡಿದ್ದಾರೆ. ರೆಸ್ಟೋರೆಂಟ್ನ ಕೆಲ ಚಿತ್ರಗಳನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ. ಇದಕ್ಕೆ ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರಿಕೆಟಿಗರು […]