ದಿನೇಶ್​ ಕಾರ್ತಿಕ್​ ಅವರಿಂದ ನಟರಾಜನ್​ ನಿರ್ಮಿಸಿದ ಕ್ರಿಕೆಟ್​ ಮೈದಾನ ಲೋಕಾರ್ಪಣೆ

ಸೇಲಂ (ತಮಿಳುನಾಡು): ಭಾರತ ತಂಡದಲ್ಲಿ ರ್ಯಾಕರ್​​​ ಸ್ಪೆಷಲಿಸ್ಟ್​ ಆಗಿರುವ ಮತ್ತು ಟಿ20 ಮಾದರಿಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರ ಟಿ ನಟರಾಜನ್​ ಅವರ ಕನಸು ನಿನ್ನೆ ಸಾಕಾರಗೊಂಡಿದೆ. ತಮ್ಮಂತೆ ಊರಿನ ಮಕ್ಕಳು ದೇಶಕ್ಕಾಗಿ ಆಡಬೇಕು ಎಂಬ ಉದ್ದೇಶದಿಂದ ಸ್ವಂತ ಖರ್ಚಿನಿಂದ ನಟರಾಜನ್​ ತಾವೇ ದುಡಿದು ಕ್ರಿಕೆಟ್​ ಕ್ರೀಡಾಂಗಣವನ್ನು ಮಾಡಿದ್ದರು. ನಿನ್ನೆ ಈ ಮೈದಾನ ಲೋಕಾರ್ಪಣೆಗೊಂಡಿದ್ದು, ಯುವ ಪ್ರತಿಭೆಗಳ ಅಭ್ಯಾಸಕ್ಕೆ ಅವಕಾಶ ಹೆಚ್ಚಿದಂತಾಗಿದೆ. ತಮಿಳುನಾಡಿನ ಕ್ರಿಕೆಟಿಗ ಟಿ ನಟರಾಜನ್​ ಅವರು ಸ್ವಂತ ಖರ್ಚಿನಿಂದ ತಾವೇ ದುಡಿದು ನಿರ್ಮಿಸಿದ […]

ಇದೇ 27ಕ್ಕೆ ವೇಳಾಪಟ್ಟಿ ಪ್ರಕಟವಾಗಲಿದ್ದು, ವಿಶ್ವಕಪ್​ಗೆ ಇನ್ನು ಮೂರೇ ತಿಂಗಳು.

ಐಸಿಸಿ ಇದೇ 27 ರಂದು ಮುಂಬೈನಲ್ಲಿ ಹೋಟೆಲ್​ವೊಂದರಲ್ಲಿ ಮಾಧ್ಯಮಗೋಷ್ಟಿ ಕರೆದಿದ್ದು, ಅಂದೇ ವಿಶ್ವಕಪ್​ ವೇಳಾಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಹೆಚ್ಚಿದೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ವೇಳೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ -BCCI) ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ (ಐಸಿಸಿ-ICC)ಗೆ ಕರಡು ವೇಳಾ ಪಟ್ಟಿಯನ್ನು ಸಲ್ಲಿಸಿತ್ತು. ಐಸಿಸಿ ಸ್ಪರ್ಧಿಸುವ ರಾಷ್ಟ್ರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ತಿಳಿಸಿ ಆಯಾ ಕ್ರಿಕೆಟ್​ ಮಂಡಳಿಗೆ ಕಳುಹಿಸಿಕೊಟ್ಟಿದೆ ಎಂದು ವರದಿಗಳಾಗಿವೆ. ವಿಶ್ವಕಪ್ ಸನಿಹವಾಗುತ್ತಿದ್ದು, ಇದೇ 27 ರಂದು ಐಸಿಸಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. […]

ಮಂಗಳೂರು ಪಿಲಿಕುಳ ಸಂತಾನೋತ್ಪತ್ತಿಯಲ್ಲಿ ದೇಶದಲ್ಲಿಯೇ ಟಾಪ್ 1 ಮೃಗಾಲಯ

ಮಂಗಳೂರು (ದಕ್ಷಿಣ ಕನ್ನಡ): ದೇಶದ ಅತೀ ದೊಡ್ಡ 17 ಮೃಗಾಲಯಗಳ ಪೈಕಿ ಒಂದಾಗಿರುವ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ಅದರಲ್ಲೂ ದೇಶದಲ್ಲಿ ಅಪರೂಪದ ಹುಲಿ, ಕಾಡು, ಶ್ವಾನ, ಕಾಳಿಂಗ, ರಿಯಾ ಜಾತಿಯ ಹಕ್ಕಿಯ ಸಂತಾನಾಭಿವೃದ್ಧಿಯಲ್ಲಿ ಪಿಲಿಕುಳ ಮೃಗಾಲಯ ಹೆಚ್ಚು ಪ್ರಸಿದ್ಧಿ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ರಾಜ್ಯ ಸರಕಾರದ […]

ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರ ಜೂ. 27ರಿಂದ ಆರಂಭ: ವೇಳಾಪಟ್ಟಿ ಪ್ರಕಟ

ಹುಬ್ಬಳ್ಳಿ : ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ವಂದೇ ಭಾರತ್​ ಬೆಂಗಳೂರು – ಧಾರವಾಡ ಮಧ್ಯೆಯ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದು, ಜೂನ್​ 27 ರಿಂದ ಅಧಿಕೃತ ಓಡಾಟ ಆರಂಭವಾಗಲಿದೆ. ವಂದೇ ಭಾರತ್ ರೈಲು ಜೂ. 27 ರಿಂದ ಕೆಎಸ್‌ಆರ್‌ ಬೆಂಗಳೂರು – ಧಾರವಾಡ ಮಧ್ಯೆ ಸಂಚಾರ ಪ್ರಾರಂಭಿಸಲಿದೆ. ಧಾರವಾಡ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ವರ್ಚುಯಲ್ ಆಗಿ ರೈಲಿಗೆ ಹಸಿರು […]

ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಆಮ್​ಸ್ಟರ್​ಡ್ಯಾಮ್​ನಲ್ಲಿ ಇಂಡಿಯನ್ ರೆಸ್ಟೋರೆಂಟ್

ಭಾರತದ ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ನೆದರ್​ಲ್ಯಾಂಡ್​ನ ರಾಜಧಾನಿ ಆಮ್​ಸ್ಟರ್​ಡ್ಯಾಮ್​ನಲ್ಲಿ ರೆಸ್ಟೋರೆಂಟ್​ ಆರಂಭಿಸಿದ್ದಾರೆ. ಮಾಜಿ, ಹಾಲಿ ಆಟಗಾರರು ಕ್ರಿಕೆಟ್​ ಆಟವಲ್ಲದೇ, ಉದ್ಯಮದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ಅದಕ್ಕೆ ರೈನಾ ಇಂಡಿಯನ್ ರೆಸ್ಟೋರೆಂಟ್ ಎಂದು ಹೆಸರಿಟ್ಟಿದ್ದಾರೆ. ಸ್ವತಃ ಆಹಾರ ಪ್ರೇಮಿಯೂ ಆಗಿರುವ ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಹೊಸ ಇನಿಂಗ್ಸ್​ ಆರಂಭಿಸಿದ್ದು, ನೆದರ್​ಲ್ಯಾಂಡ್​​ನ ಆಮ್​ಸ್ಟರ್​ಡ್ಯಾಮ್​ನಲ್ಲಿ ತಮ್ಮದೇ ಹೆಸರಿನಲ್ಲಿ ರೆಸ್ಟೋರೆಂಟ್​ ಶುರು ಮಾಡಿದ್ದಾರೆ. ರೆಸ್ಟೋರೆಂಟ್​ನ ಕೆಲ ಚಿತ್ರಗಳನ್ನು ಟ್ವೀಟ್​ ಮಾಡಿ ಹಂಚಿಕೊಂಡಿದ್ದಾರೆ. ಇದಕ್ಕೆ ಬ್ಯಾಟಿಂಗ್​ ಕಿಂಗ್ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರಿಕೆಟಿಗರು […]