ಜುಲೈ 6ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಉದ್ಯೋಗ ಮೇಳ

ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ ವತಿಯಿಂದ ಜುಲೈ 6ರಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕೆಲಸ ಮಾಡಲು ಸಿದ್ಧರಿರುವ ಪದವಿ, ಡಿಪ್ಲೊಮಾ,ಸ್ನಾತಕೋತ್ತರ ಪದವಿ ಪಡೆದಿರುವ ಅಥವಾ ಅಂತಿಮ ವರ್ಷದಲ್ಲಿ ಕಲಿಯುತ್ತಿರುವ ಯಾರೂ ಬೇಕಾದರೂ ಭಾಗವಹಿಸಬಹುದಾಗಿದೆ.

ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾದ ಹಿನ್ನೆಲೆ, ಜಿಲ್ಲೆಯಲ್ಲಿ ಜುಲೈ 5ರಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ನಾಳೆ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಂದು ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಮಾಡಿದ್ದಾರೆ. ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲೆಗಳಿಂದ ಹಿಡಿದು ಪದವಿ ಪೂರ್ವ ಕಾಲೇಜುಗಳ ತನಕ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

ಕೆನಡಾ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿ ಭಾರತವನ್ನು ಮುನ್ನಡೆಸಲಿದ್ದಾರೆ ಪಿವಿ ಸಿಂಧು, ಲಕ್ಷ್ಯ ಸೇನ್

ಟೊರೊಂಟೊ(ಕೆನಡಾ): ಕ್ಯಾಲ್ಗರಿಯಲ್ಲಿ ಇಂದಿನಿಂದ ಪ್ರಾರಂಭವಾಗುವ ಕೆನಡಾ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಸ್ಟಾರ್ ಷಟ್ಲರ್‌ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಭಾರತವನ್ನು ಮುನ್ನಡೆಸಲಿದ್ದಾರೆ.ಗಾಯದಿಂದ ಮರಳಿದ ನಂತರ ಪಿವಿ ಸಿಂಧು ಅವರ ರಾಕೆಟ್​ ಮೌನವಾಗಿದೆ ಎನ್ನಬಹುದು. ಈ ವರ್ಷ ಅವರಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ ಕೆನಡಾ ಓಪನ್​ನಿಂದ ಕಮ್​ಬ್ಯಾಕ್​ ನಿರೀಕ್ಷೆ ಇದೆ. ತೈಪೆ ಓಪನ್ 2023 ಅನ್ನು ಕಳೆದುಕೊಂಡ ನಂತರ ಪಿವಿ ಸಿಂಧು ಮತ್ತೆ ತಮ್ಮ ಹೊಸ ಪ್ರಯಾಣವನ್ನು ಕೆನಡಾ ಓಪನ್​ನಿಂದ ಆರಂಭಿಸಲು ಇಚ್ಚಿಸಿದ್ದಾರೆ. 12ನೇ […]

ಆಚಾರ್ & ಕೋ ಸಿನಿಮಾ ಜುಲೈ 28ರಂದು ರಾಜ್ಯಾದ್ಯಂತ ತೆರೆಕಾಣಲಿದೆ

ಜುಲೈ 28ರಂದು ಬಿಡುಗಡೆ: ಮಹತ್ವಾಕಾಂಕ್ಷೆಯ ಸಹೋದರಿಯರು ಒಂದು ಕಡೆ ಆಧುನಿಕತೆಯ ಸವಾಲುಗಳನ್ನು ಎದುರಿಸುತ್ತಾ, ಇನ್ನೊಂದೆಡೆ ತಮ್ಮ ಬೇರುಗಳನ್ನೂ ಬಿಡದೇ ಹೇಗೆ ಯಶಸ್ವಿಯಾಗುತ್ತಾರೆ? ಎಂಬ ಕಥೆಯನ್ನು ಪ್ರೇಕ್ಷಕರಿಗೆ ಹೇಳಹೊರಟಿದೆ ವಿಭಿನ್ನ ಶೀರ್ಷಿಕೆಯ ಸಿನಿಮಾ. ಜುಲೈ 28ರಂದು ಸಿನಿಮಾ ತೆರೆಕಾಣಲಿದೆ. ಕನ್ನಡ ಸಿನಿಮೋದ್ಯಮದಲ್ಲಿ ​​ಸದಭಿರುಚಿಯ, ಹೊಸ ಶೈಲಿಯ ಚಿತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಪಿ.ಆರ್.ಕೆ ಪ್ರೊಡಕ್ಷನ್ಸ್ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ನಿರ್ಮಾಣ ಮಾಡಿದೆ. ಸಿಂಧು ಶ್ರೀನಿವಾಸಮೂರ್ತಿ ಚೊಚ್ಚಲ ನಿರ್ದೇಶನದ ‘ಆಚಾರ್ & ಕೋ’ ಸಿನಿಮಾ ಬಿಡುಗಡೆಗೆ ದಿನಾಂಕ […]