ಏಷ್ಯಾಕಪ್ ಮೂಲಕ ಕೆಎಲ್ ರಾಹುಲ್, ಜಸ್ಪ್ರೀತ್ ಬೂಮ್ರಾ ಮತ್ತೆ ಭಾರತ ತಂಡಕ್ಕೆ
ನವದೆಹಲಿ: ಈಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಆಟಗಾರರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಗಾಯಗೊಂಡು ಕಳೆದ ನವೆಂಬರ್ನಿಂದ ಕ್ರಿಕೆಟ್ನಿಂದ ದೂರವುಳಿದಿರುವ ಬೂಮ್ರಾ, ಐಪಿಎಲ್ನಲ್ಲಿ ಇಂಜ್ಯುರಿಯಾದ ಕೆಎಲ್ ರಾಹುಲ್ ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಜಸ್ಪ್ರೀತ್ ಬೂಮ್ರಾ ಗಾಯಗೊಂಡಿದ್ದು, ತಂಡಕ್ಕೆ ಹಿನ್ನಡೆ ಉಂಟಾಗಿದೆ. ಏಷ್ಯಾ ಕಪ್ ಮೂಲಕ ಗಾಯಾಳುಗಳಾದ ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬೂಮ್ರಾ ಭಾರತ ಕ್ರಿಕೆಟ್ ತಂಡಕ್ಕೆ […]
ಜೀನ್ಸ್, ಟಿ ಶರ್ಟ್ ನಿಷೇಧ : ನೌಕರರಿಗೆ ಆದೇಶಿಸಿದ ಬಿಹಾರ ಶಿಕ್ಷಣ ಇಲಾಖೆ
ಪಾಟ್ನಾ (ಬಿಹಾರ): ಈ ಸಂಬಂಧ ಶಿಕ್ಷಣ ಇಲಾಖೆಯ ಆಡಳಿತದ ವಿಭಾಗದ ನಿರ್ದೇಶಕ ಸುಬೋಧ್ ಕುಮಾರ್ ಚೌಧರಿ ಬುಧವಾರ ಆದೇಶ ಹೊರಡಿಸಿದ್ದಾರೆ. ಕರ್ತವ್ಯದ ಸಂಸ್ಕೃತಿಗೆ ವಿರುದ್ಧವಾಗಿರುವ ಕಾರಣ ಕಚೇರಿಯಲ್ಲಿ ಜೀನ್ಸ್ ಮತ್ತು ಟಿ-ಶರ್ಟ್ಗಳಂತಹ ಕ್ಯಾಶುಯಲ್ ಬಟ್ಟೆಗಳನ್ನು ಧರಿಸದಂತೆ ಬಿಹಾರ ರಾಜ್ಯ ಶಿಕ್ಷಣ ಇಲಾಖೆಯ ಉದ್ಯೋಗಿಗಳಿಗೆ ಸೂಚಿಸಿದೆ. ಬಿಹಾರದ ಶಿಕ್ಷಣ ಇಲಾಖೆಯಲ್ಲಿ ಡ್ರೆಸ್ ಕೋಡ್ ನಿಯಮ ಜಾರಿ ಮಾಡಲಾಗಿದೆ. ಕಚೇರಿಗಳಿಗೆ ಜೀನ್ಸ್ ಮತ್ತು ಟಿ-ಶರ್ಟ್ ಧರಿಸಬರುವಂತಿಲ್ಲ ಎಂದು ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ನೌಕರರು ಕಚೇರಿಯ ಕರ್ತವ್ಯದ ಸಂದರ್ಭದಲ್ಲಿ ಫಾರ್ಮಲ್ […]
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ: ಮೈಸೂರು ಜಿಲ್ಲೆಯಲ್ಲಿ 19 ಬೆಳೆಗಳಿಗೆ ರೈತರು ಮಾಡಿಸಬಹುದು ಬೆಳೆ ವಿಮೆ
ಮೈಸೂರು: 2023 -24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ – ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಕರ್ನಾಟಕ ಸರ್ಕಾರದ ವತಿಯಿಂದ ಜಾರಿಗೊಳಿಸುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ ಇದಕ್ಕೆ ನಾಳೆ ಅಂತಿಮ ದಿನವಾಗಿದೆ. ಜಿಲ್ಲೆಗೆ ಅಧಿಸೂಚನೆ ಮಾಡಿರುವ ಬೆಳೆಗಳ ವಿಮಾ, ವಿಮಾ ಕಂತು ಮತ್ತು ಅಂತಿಮ ನೊಂದಣಿ ದಿನಾಂಕದ ವಿವರ: ಎಳ್ಳಿನ ಬೆಳೆಗೆ (ಮಳೆಯಾಶ್ರಿತ) ಪ್ರತಿ ಎಕರೆಗೆ ವಿಮಾ ಮೊತ್ತ 11,635.13 ರೂ.ಗಳಿದ್ದು ವಿಮಾ ಕಂತು 232.70 ರೂ., ಸೂರ್ಯಕಾಂತಿ ಬೆಳೆಗೆ(ಮಳೆಯಾಶ್ರಿತ) ಪ್ರತಿ ಎಕರೆಗೆ ವಿಮಾ […]
ಹಲವು ಭಾರತೀಯರಿಗೆ ರಾಮ್ ಚರಣ್, ಜೂ. ಎನ್ಟಿಆರ್ ಸೇರಿ ಸಿಕ್ತು ಆಸ್ಕರ್ ಸದಸ್ಯತ್ವ
ನಟನಾ ವಿಭಾಗದಲ್ಲಿ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಸದಸ್ಯರಾಗಿ ಸ್ಥಾನ ಪಡೆದಿದ್ದಾರೆ. ಈ ಬಾರಿ ಆಸ್ಕರ್ ತೀರ್ಪುಗಾರರಲ್ಲಿ ಒಟ್ಟು 398 ಹೊಸ ಸದಸ್ಯರಿಗೆ ಸ್ಥಾನ ನೀಡುತ್ತಿರುವುದಾಗಿ ಅಕಾಡೆಮಿ ತಂಡ ಪ್ರಕಟಿಸಿದೆ. ವಿಶ್ವ ಶ್ರೇಷ್ಠ ಪ್ರಶಸ್ತಿ ಆಸ್ಕರ್ ಜೊತೆಗೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ‘RRR’ ತಂಡ ಮತ್ತೊಂದು ಅಪರೂಪದ ಗೌರವಕ್ಕೆ ಪಾತ್ರವಾಗಿದೆ. ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಸೇರಿ ಹಲವು ಭಾರತೀಯ ಸಿನಿ ಗಣ್ಯರು ಆಸ್ಕರ್ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಸಂಗೀತ ನಿರ್ದೇಶಕ […]
ಅನಿಮಲ್ ಸೆಟ್ನಿಂದ ನಟನ ಫೋಟೋ ವೈರಲ್ – ರಗಡ್ ಲುಕ್ನಲ್ಲಿ ರಣ್ಬೀರ್ ಕಪೂರ್
ಈ ನಟರು ಮೊದಲ ಬಾರಿ ಒಟ್ಟಿಗೆ ನಟಿಸಿದ್ದು, ಅನಿಮಲ್ ಶೂಟಿಂಗ್ ಸೆಟ್ನಿಂದ ನಟ ರಣ್ಬೀರ್ ಕಪೂರ್ ಅವರ ಫೋಟೋ ವೈರಲ್ ಆಗಿದೆ. ಅನಿಮಲ್ ಶೂಟಿಂಗ್ ಸೆಟ್ನಿಂದ ನಟ ರಣ್ಬೀರ್ ಕಪೂರ್ ಅವರ ಫೋಟೋ ವೈರಲ್ ಆಗಿದೆ.ಅನಿಮಲ್ 2023ರ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು. ಕಬೀರ್ ಸಿಂಗ್ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಆಯಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ಬಾಲಿವುಡ್ ಬಹುಬೇಡಿಕೆ ನಟ ರಣ್ಬೀರ್ ಕಪೂರ್ ಸ್ಕ್ರೀನ್ ಶೇರ್ ಮಾಡಿದ್ದಾರೆ.ಬಾಲಿವುಡ್ನ ಬಹುಬೇಡಿಕೆ, […]