ಉಡುಪಿ: ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ವತಿಯಿಂದ ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 1 ರಂದು ರಾತ್ರಿ 8 ರಿಂದ 8.30 ರ ವರೆಗೆ ಆಕಾಶವಾಣಿಯಲ್ಲಿ ಫೋನ್ ಇನ್ ನೇರ ಪ್ರಸಾರ ಕಾರ್ಯಕ್ರಮವು ನಡೆಯಲಿದ್ದು, ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ದೂರವಾಣಿ ಸಂಖ್ಯೆ: 080-22370477, 22370488 ಹಾಗೂ 22370499 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಇ-ಮೇಲ್ [email protected] ಮೂಲಕವೂ ಮೇ 31 ರ ಒಳಗೆ ಕಳುಹಿಸಬಹುದಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












