ಅಗ್ನಿಶಾಮಕ ದಳದ ಕಚೇರಿಯಲ್ಲಿ ಆಯುಧ ಪೂಜೆ

ಉಡುಪಿ: ಅಗ್ನಿಶಾಮಕ ದಳದ ಪ್ರಧಾನ ಕಚೇರಿಯಲ್ಲಿ ಜಿಲ್ಲಾ ಮುಖ್ಯಸ್ಥ ವಸಂತಕುಮಾರ್ ಮಾರ್ಗದರ್ಶನದಲ್ಲಿ ಆಯುಧ ಪೂಜೆ ನೆರವೇರಿತು. ಠಾಣಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.