ವಯನಾಡು (ಕೇರಳ): ಕೇರಳದ ವಯನಾಡು ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಜೀಪ್ ಅಪಘಾತದಲ್ಲಿ 9 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಚಹಾ ತೋಟದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಕಂದಕಕ್ಕೆ ಬಿದ್ದು 9 ಜನರು ಮೃತಪಟ್ಟ ಘಟನೆ ಕೇರಳದ ವಯನಾಡು ಜಿಲ್ಲೆಯಲ್ಲಿ ಇಂದು ನಡೆದಿದೆ.
ಅಪಘಾತಕ್ಕೀಡಾದ ಜೀಪ್ ಚಹಾ ತೋಟದ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು. ಒಟ್ಟು 12 ಜನ ಮಹಿಳೆಯರು ಜೀಪ್ನಲ್ಲಿದ್ದರು. ಇವರು ಚಹಾ ತೋಟದ ಕೆಲಸ ಮುಗಿಸಿ ತಮ್ಮ ಮನೆಗಳಿಗೆ ಮರಳುತ್ತಿದ್ದರು. ಮಧ್ಯಾಹ್ನ 3:30ರ ಸುಮಾರಿಗೆ ಮಾರ್ಗ ಮಧ್ಯೆ 30 ಅಡಿ ಆಳದ ಕಂದಕಕ್ಕೆ ಜೀಪ್ ಉರುಳಿಬಿದ್ದಿದೆ. ಘಟನಾ ಸ್ಥಳ ಕಲ್ಲಿನ ಭೂಪ್ರದೇಶವಾಗಿದ್ದರಿಂದ ರಕ್ಷಣಾ ಕಾರ್ಯಕ್ಕೆ ತೊಂದರೆಯಾಗಿತ್ತು.
ಈ ಬಗ್ಗೆ ಮಾಧ್ಯಮಗಳಿಗೆ ಅರಣ್ಯ ಸಚಿವ ಎ.ಕೆ.ಶಶಿಧರನ್ ಪ್ರತಿಕ್ರಿಯಿಸಿ, ”ಸಿಎಂ ಪಿಣರಾಯಿ ವಿಜಯನ್ ನಿರ್ದೇಶನದಂತೆ ಮಾನಂತವಾಡಿಗೆ ತೆರಳುತ್ತಿದ್ದೇನೆ. ಅಲ್ಲಿನ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಮೃತದೇಹಗಳನ್ನೂ ಇದೇ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ಇಲ್ಲಿನ ತಲಪ್ಪುಳ ಸಮೀಪ ಜೀಪ್ವೊಂದು ರಸ್ತೆ ಪಕ್ಕದ ಕಮರಿಗೆ ಬಿದ್ದು ದುರ್ಘಟನೆ ನಡೆದಿದೆ. ಮೃತರೆಲ್ಲರೂ ಮಹಿಳೆಯರೇ ಆಗಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ












