ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಹಿನ್ನೆಲೆ : ತುರ್ತು ಸಭೆ ಕರೆದ ಡಿಸಿಎಂ

ಕೆಲ ದಿನಗಳ ಹಿಂದಷ್ಟೇ ಕೋಲಾರದ ಮಾಲೂರಿನಲ್ಲಿ ಶಾಲಾ ಮಕ್ಕಳನ್ನು ಶೌಚಗುಂಡಿಗೆ ಇಳಿಸಿದ ಪ್ರಕರಣ ಬೆಳಕಿಗೆ ಬಂದಿತ್ತು.ಈ ಪ್ರಕರಣ ಮಾಸುವ ಮುನ್ನವೇ ಇಂದು ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳ ಕೈಯಲ್ಲಿ ಟಾಯ್ಲೆಟ್ ತೊಳೆಸಲಾಗಿದೆ. ರಾಜ್ಯದಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ತೊಳೆಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

ಶೌಚಾಲಯ ತೊಳೆಸುವುದು ಸರಿಯಲ್ಲ. ಈ ಅಧಿಕಾರವನ್ನು ಯಾವ ಶಿಕ್ಷಕರಿಗೂ ನೀಡಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸಮಗ್ರ ವರದಿ ಪಡೆದು ತಪ್ಪಿತಸ್ಥರು ವಿರುದ್ಧ ಕ್ರಮಕ್ಕೆ ನಿರ್ಧಾರ ಮಾಡಬೇಕಿದೆ. ಯಾರನ್ನೂ ರಕ್ಷಣೆ ಮಾಡುವ ಮಾತಿಲ್ಲ. ಶಾಲಾ ಮಕ್ಕಳಿಂದ ಈ ರೀತಿ ಕೆಲಸ ಮಾಡಿಸಬಾರದು. ಗಿಡ ನೆಡುವುದು, ಶಾಲಾ ಸ್ವಚ್ಛತೆ ಬಗ್ಗೆ ಹೇಳಿಕೊಡಲಾಗುತ್ತದೆ.