ಬೈಲೂರು: ಮೈತ್ರಿ ಸೇವಾ ಸಂಘದ ವತಿಯಿಂದ ಸನ್ಮಾನ

ಕಾರ್ಕಳ: ಎಸ್.ಎಸ್.ಎಲ್.ಸಿ ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಗಣಿತ ನಗರ ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿನಿ ಕಣಜಾರು ಹಡಂಕೋಳಿಯ ಸ್ವಸ್ತಿ ಕಾಮತ್ ಹಾಗೂ ಫಿಜಿಯೋಥೆರಫಿಯಲ್ಲಿ ದ್ವಿತೀಯ ರ್ಯಾಂಕ್ ಅನ್ನು ಪಡೆದಿರುವ ಮೂಡುಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕೌಡೂರಿನ ನಿಶಾ ಶೆಟ್ಟಿ ಇವರಿಗೆ ಜೂ.14ರಂದು ಮೈತ್ರಿ ಸೇವಾ ಸಂಘದ ಸಾಮಾನ್ಯ ಸಭೆಯಲ್ಲಿ ಶಾಲು ಹೊಂದಿಸಿ ಫಲ ಪುಷ್ಪ ಹಾಗೂ ಗೌರವಧನ ನೀಡಿ ಗೌರವಿಸಲಾಯಿತು. ವಿಕ್ರಂ ಹೆಗ್ಡೆಯವರು ಸನ್ಮಾನಿತರ ಬಗ್ಗೆ ಮಾತನಾಡಿದರು.

ಈ ಸಂದರ್ಭ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ, ಕೋಶಾಧಿಕಾರಿ ತಾರೇಶ್ ರಾವ್, ಗೌರವಾಧ್ಯಕ್ಷ ಚಂದ್ರಶೇಖರ್ ಮಾಡ ಹಾಗೂ ಸಂಘದ ಸದಸ್ಯರುಗಳು ಸನ್ಮಾನಿತರ ಕುಟುಂಬದವರು ಉಪಸ್ಥಿತರಿದ್ದರು.