ಮೈತ್ರಿ ಸೇವಾ ಸಂಘ ಬೈಲೂರು ಇದರ ವತಿಯಿಂದ ಸ್ಕೂಲ್ ಬ್ಯಾಗ್ ವಿತರಣೆ

ಕಾರ್ಕಳ: ಕಣಜಾರು ಮಡಿಬೆಟ್ಟು ಶಾಲಾ ಮಕ್ಕಳಿಗೆ ಮೈತ್ರಿ ಸಂಘದ ವತಿಯಿಂದ ಜೂ.23 ರಂದು ಉಚಿತವಾಗಿ ಸ್ಕೂಲ್ ಬ್ಯಾಗ್ ನ್ನು ವಿತರಿಸಲಾಯಿತು.

ಈ ಸಂದರ್ಭ ಸಂಸ್ಥೆಯ ಮುಖ್ಯಸ್ಥರು, ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿಗಳು, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು, ಮೈತ್ರಿ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಪೋಷಕರು, ವಿದ್ಯಾರ್ಥಿಗಳು, ಶಾಲಾ ಅಭಿಮಾನಿಗಳು, ಶಿಕ್ಷಕರುಗಳು ಸೇರಿದ್ದ ಈ ಕಾರ್ಯಕ್ರಮದಲ್ಲಿ ವಿಕ್ರಮ್ ಹೆಗ್ಡೆ ಯವರು ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾತನಾಡಿದರು, ಶಾಲಾ ಮುಖ್ಯೋಪಾಧ್ಯಾಯರಾದ ಅಶ್ವಥ್ ಬಿ.ಕೆ. ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು.