ಬೈಂದೂರು: ರೈಲಿಗೆ ‘ಮೂಕಾಂಬಿಕಾ ಎಕ್ಸ್‌ಪ್ರೆಸ್‌’ ಮರುನಾಮಕರಣಕ್ಕೆ ಮನವಿ.

ಬೈಂದೂರು: ವಾರಕ್ಕೊಮ್ಮೆ ಇರುವ 10215/10216 ಈ ಸಂಖ್ಯೆಯ ರೈಲಿಗೆ ಮೂಕಾಂಬಿಕಾ ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡಿ ಪ್ರತಿದಿನ ಸೇವೆ ನೀಡಬೇಕು ಎಂದು ಒತ್ತಾಯಿಸಿ, ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ವಿನಂತಿಸಿದರು.

ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲುಗಳಿಗೆ ನಿಲುಗಡೆ ನೀಡುವಂತೆ ಅವರು ಸಚಿವರನ್ನು ವಿನಂತಿಸಿದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ರಾಘವೇಂದ್ರ ತಿಳಿಸಿದ್ದಾರೆ.

ರೈಲ್ವೆ ಸಲಹಾ ಮಂಡಳಿಯ ಮಾಜಿ ಸದಸ್ಯ ಬೈಂದೂರಿನ ಕೆ. ವೆಂಕಟೇಶ್ ಕಿಣಿ ಹಾಜರಿದ್ದರು.