ಬಜಗೋಳಿ: ಪೊರ್ತು ಚಾರಿಟೇಬಲ್ ಟ್ರಸ್ಟ್ ವಾರ್ಷಿಕೋತ್ಸವ

ಕಾರ್ಕಳ: ಪೊರ್ತು ಚಾರಿಟೇಬಲ್ ಟ್ರಸ್ಟ್ ಇದರ 1ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಸ.ಹಿ.ಪ್ರಾ. ಶಾಲೆ ಬಜಗೊಳಿಯಲ್ಲಿ ನಡೆಯಿತು.
ಕಾರ್ಯಕ್ರ‌ಮದ ಅಂಗವಾಗಿ‌ ವಿಜೇತ ವಿಶೇಷ ಶಾಲಾ ಮಕ್ಕಳು ಹಾಗೂ ಇತರ ವಿವಿಧ  ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 5 ಸರಕಾರಿ ಶಾಲೆಗೆ ಅವಶ್ಯಕ ನೆರವನ್ನು ವಾರ್ಷಿಕೋತ್ಸವದ ಸಂದರ್ಭದಲ್ಲಿ ಪೊರ್ತು ಟ್ರಸ್ಟ್ ವತಿಯಿಂದ ನೀಡಲಾಯಿತು.
ಕಾರ್ಯಕ್ರಮದಲ್ಲಿ‌ ಮುಖ್ಯ ಅತಿಥಿಗಳಾಗಿ ಪತ್ರಕರ್ತ ವಸಂತ್ ಗಿಳಿಯಾರ್, ಸಮಾಜ ಸೇವಕರಾದ ಶ್ರೀ ವಿಶು ಶೆಟ್ಟಿ ಅಂಬಲ್ಪಾಡಿ, ಹ್ಯುಮ್ಯಾನಿಟಿ ಟ್ರಸ್ಟ್ ನ ರೋಷನ್ ಬೆಳ್ಮಣ್, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್, ವಿಕಲಚೇತನರ ರಾಷ್ಟ್ರೀಯ  ಕಬಡ್ಡಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ, ಪೊರ್ತು ಟ್ರಸ್ಟ್ ನ ಅಧ್ಯಕ್ಷರ ಜಗದೀಶ್ ಕಡಂಬ ವೇದಿಕೆಯಲ್ಲಿ ಉಪಸ್ಥಿತರಿದ್ದರು.