ಸೂಕ್ತ ಕಾರಣವಿಲ್ಲದೆ ವಾಹನ ತಪಾಸಣೆ ನಡೆಸುವಂತಿಲ್ಲ: ಆದೇಶ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವೆಂದ ಡಿಜಿಪಿ ಪ್ರವೀಣ್ ಸೂದ್

ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಸುಖಾಸುಮ್ಮನೆ ತಡೆದು ನಿಲ್ಲಿಸದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯ. ಡ್ರಿಂಕ್ ಆ್ಯಂಡ್ ಡ್ರೈವ್ ಮತ್ತು ಕಣ್ಣಿಗೆ ಕಾಣುವಂತಹ ಸಂಚಾರ ನಿಯಮ ಉಲ್ಲಂಘನೆ, ಅಪರಾಧ ಕಂಡುಬಂದ ಹೊರತಾಗಿ ಕೇವಲ ದಾಖಲೆಗಳ ಪರಿಶೀಲನೆಗಾಗಿ ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸುವಂತಿಲ್ಲ. ಈ ಸೂಚನೆಗಳನ್ನು ಕೆಳ ಹಂತಕ್ಕೆ ತಲುಪಿಸಿ ಮತ್ತು ಅದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ  ಎಂದು ಸೂದ್ ಎಚ್ಚರಿಸಿದ್ದಾರೆ.

 

Order copy